6:17 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬಾಂಗ್ಲಾದೇಶಿಗರು ಪತ್ತೆ ರಾಜ್ಯ ಸರಕಾರಕ್ಕೆ ಎಚ್ಚರಿಕೆಯ ಗಂಟೆ: ಡಾ. ಭರತ್ ಶೆಟ್ಟಿ

10/07/2026, 22:27

ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಮುಕ್ಕದಲ್ಲಿ 8 ಮಂದಿ ಬಾಂಗ್ಲಾದೇಶಿಗಳು ಕೂಲಿ ಕಾರ್ಮಿಕರ ಸೋಗಿನಲ್ಲಿ ಅಕ್ರಮವಾಗಿ ನೆಲೆಸಿ, ಅನಧಿಕೃತ ಆಧಾರ್ ಕಾರ್ಡ್ ಮಾಡಿಸಿಕೊಂಡಿರುವ ಘಟನೆ ರಾಜ್ಯದ ಭದ್ರತೆಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದ್ದಾರೆ.
ಇಂತಹ ಅಕ್ರಮ ನುಸುಳುವಿಕೆಗಳನ್ನು ಗಂಭೀರವಾಗಿ ಪರಿಗಣಿಸದಿದ್ದರೆ ಮುಂದೆ ಇದರ ಪರಿಣಾಮ ಭೀಕರವಾಗಿರುತ್ತದೆ. ಬಾಂಗ್ಲಾ ದೇಶಗರನ್ನು ಹೊರಹಾಕಲು ಕೇಂದ್ರ ಸರಕಾರದ ಜೊತೆ ರಾಜ್ಯ ಸರಕಾರ ಕೈಜೋಡಿಸಬೇಕು ಎಂದು ಅವರು ಸರಕಾರವನ್ನು ಒತ್ತಾಯಿಸಿದ್ದಾರೆ.
ದುರದೃಷ್ಟವಶಾತ್ ರಾಜ್ಯದ ಗೃಹ ಮಂತ್ರಿ ಪ್ರಿಯಾಂಕ್ ಖರ್ಗೆ ಅವರು ಕೇವಲ ಆರೆಸ್ಸೆಸ್, ಆರೆಸ್ಸೆಸ್ ಎಂದು
ಕನವರಿಸುವ ಬದಲು ದೇಶಕ್ಕೆ ನೇರ ಬೆದರಿಕೆಯಾಗಿರುವ ಇಂತಹ ಪ್ರಕರಣಗಳನ್ನು ಪತ್ತೆಹಚ್ಚುವತ್ತ ಗಮನ ಕೊಡಬೇಕು ಎಂದಿದ್ದಾರೆ.
ಈ ಬಾಂಗ್ಲಾದೇಶಿಗಳಿಗೆ ಅನಧಿಕೃತ ಆಧಾರ ಕಾರ್ಡ್ ಸೇರಿದಂತೆ ಎಲ್ಲಾ ಸೌಲಭ್ಯ ಒದಗಿಸಿಕೊಟ್ಟ ಏಜೆಂಟ್‌ಗಳು ಮತ್ತು ಅಧಿಕಾರಿಗಳ ಮೇಲೆ ಕಠಿಣ ಶಿಕ್ಷೆ ವಿಧಿಸಲು ಸರ್ಕಾರ ಕೂಡಲೇ ಮುಂದಾಗಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕರಾವಳಿಯ ಜನರ ಜೀವ ಮತ್ತು ಸುರಕ್ಷತೆ ಬಲಿಯಾಗುತ್ತದೆ.
ರಾಜ್ಯದ ಗೃಹ ಸಚಿವಾಲಯ ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆ ಹಚ್ಚಿ ಗಂಭೀರ ಕ್ರಮವನ್ನು ಕೈಗೊಳ್ಳಬೇಕು ಎಂದು ಶಾಸಕ ಭರತ್ ಶೆಟ್ಟಿ ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು