9:48 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ: 5 ಶಾಲೆ ದತ್ತು ಸ್ವೀಕಾರ 

05/06/2021, 19:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ್  ಅವರು ಸರಕಾರಿ ಪ್ರಾಥಮಿಕ ಶಾಲೆ ಮಲ್ಲೇದೇವರಗುಡ್ಡ ದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಇರುವುದರಿಂದ ನಾವೆಲ್ಲರೂ ಜೀವಂತವಾಗಿದ್ದೇವೆ. ಪ್ರತಿಯೊಬ್ಬರು ಜನ್ಮದಿನ ಆಚರಣೆ ಮಾಡಿಕೊಳ್ಳುವಾಗ ಒಂದು ಗಿಡವಾದರೂ ನಾಟಿ ಮಾಡಿದರೆ ಜೀವನ ಪಾವನ ಎಂದು ತಿಳಿಸಿದರು. ಇಂದು ಜಗತ್ತಿಗೆ ಹರಡಿರುವ ಭಯಾನಕ ರೋಗ ಕೋವಿಡ್ ಇದನ್ನು ಮುಕ್ತ ಗಳಿಸಬೇಕಾದರೆ ಪ್ರತಿಯೊಬ್ಬರು ಗಿಡ ಗಳನ್ನು ಹಚ್ಚುವದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಚೆನ್ನಾಗಿ ಗಾಳಿ ಬರುವುದರಿಂದ ಆಮ್ಲಜನಕ ಜಾಸ್ತಿಯಾಗುತ್ತದೆ ಎಂದು ಆವರು ನುಡಿದರು. 

ಇದೇ ಸಂದರ್ಭದಲ್ಲಿ ದೇವದುರ್ಗ ತಾಲೂಕಿನಾದ್ಯಂತ ಸುಮಾರು 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲೆದೇವರಗುಡ್ಡ ಶಾಲೆ ಸೇರಿದಂತೆ ಸುಮಾರು ಐದು ಶಾಲೆಯನ್ನು ದತ್ತು ಪಡೆದು ಉನ್ನತಿ ಕರಿಸುವುದಾಗಿ ಶ್ರೀದೇವಿ ನಾಯಕ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಹಿರಿಯರು ಮತ್ತು ಯುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿ ಬಳಗದವರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ರಫಿ, ವಿಶ್ವರಾದ್ಯ ನಾಯಕ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು