3:58 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ: 5 ಶಾಲೆ ದತ್ತು ಸ್ವೀಕಾರ 

05/06/2021, 19:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ್  ಅವರು ಸರಕಾರಿ ಪ್ರಾಥಮಿಕ ಶಾಲೆ ಮಲ್ಲೇದೇವರಗುಡ್ಡ ದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಇರುವುದರಿಂದ ನಾವೆಲ್ಲರೂ ಜೀವಂತವಾಗಿದ್ದೇವೆ. ಪ್ರತಿಯೊಬ್ಬರು ಜನ್ಮದಿನ ಆಚರಣೆ ಮಾಡಿಕೊಳ್ಳುವಾಗ ಒಂದು ಗಿಡವಾದರೂ ನಾಟಿ ಮಾಡಿದರೆ ಜೀವನ ಪಾವನ ಎಂದು ತಿಳಿಸಿದರು. ಇಂದು ಜಗತ್ತಿಗೆ ಹರಡಿರುವ ಭಯಾನಕ ರೋಗ ಕೋವಿಡ್ ಇದನ್ನು ಮುಕ್ತ ಗಳಿಸಬೇಕಾದರೆ ಪ್ರತಿಯೊಬ್ಬರು ಗಿಡ ಗಳನ್ನು ಹಚ್ಚುವದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಚೆನ್ನಾಗಿ ಗಾಳಿ ಬರುವುದರಿಂದ ಆಮ್ಲಜನಕ ಜಾಸ್ತಿಯಾಗುತ್ತದೆ ಎಂದು ಆವರು ನುಡಿದರು. 

ಇದೇ ಸಂದರ್ಭದಲ್ಲಿ ದೇವದುರ್ಗ ತಾಲೂಕಿನಾದ್ಯಂತ ಸುಮಾರು 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲೆದೇವರಗುಡ್ಡ ಶಾಲೆ ಸೇರಿದಂತೆ ಸುಮಾರು ಐದು ಶಾಲೆಯನ್ನು ದತ್ತು ಪಡೆದು ಉನ್ನತಿ ಕರಿಸುವುದಾಗಿ ಶ್ರೀದೇವಿ ನಾಯಕ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಹಿರಿಯರು ಮತ್ತು ಯುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿ ಬಳಗದವರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ರಫಿ, ವಿಶ್ವರಾದ್ಯ ನಾಯಕ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು