2:38 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ: 5 ಶಾಲೆ ದತ್ತು ಸ್ವೀಕಾರ 

05/06/2021, 19:06

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಶ್ರೀದೇವಿ ನಾಯಕ್  ಅವರು ಸರಕಾರಿ ಪ್ರಾಥಮಿಕ ಶಾಲೆ ಮಲ್ಲೇದೇವರಗುಡ್ಡ ದಲ್ಲಿ ಸಸಿ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪರಿಸರ ಇರುವುದರಿಂದ ನಾವೆಲ್ಲರೂ ಜೀವಂತವಾಗಿದ್ದೇವೆ. ಪ್ರತಿಯೊಬ್ಬರು ಜನ್ಮದಿನ ಆಚರಣೆ ಮಾಡಿಕೊಳ್ಳುವಾಗ ಒಂದು ಗಿಡವಾದರೂ ನಾಟಿ ಮಾಡಿದರೆ ಜೀವನ ಪಾವನ ಎಂದು ತಿಳಿಸಿದರು. ಇಂದು ಜಗತ್ತಿಗೆ ಹರಡಿರುವ ಭಯಾನಕ ರೋಗ ಕೋವಿಡ್ ಇದನ್ನು ಮುಕ್ತ ಗಳಿಸಬೇಕಾದರೆ ಪ್ರತಿಯೊಬ್ಬರು ಗಿಡ ಗಳನ್ನು ಹಚ್ಚುವದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಚೆನ್ನಾಗಿ ಗಾಳಿ ಬರುವುದರಿಂದ ಆಮ್ಲಜನಕ ಜಾಸ್ತಿಯಾಗುತ್ತದೆ ಎಂದು ಆವರು ನುಡಿದರು. 

ಇದೇ ಸಂದರ್ಭದಲ್ಲಿ ದೇವದುರ್ಗ ತಾಲೂಕಿನಾದ್ಯಂತ ಸುಮಾರು 3 ಸಾವಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಲ್ಲೆದೇವರಗುಡ್ಡ ಶಾಲೆ ಸೇರಿದಂತೆ ಸುಮಾರು ಐದು ಶಾಲೆಯನ್ನು ದತ್ತು ಪಡೆದು ಉನ್ನತಿ ಕರಿಸುವುದಾಗಿ ಶ್ರೀದೇವಿ ನಾಯಕ್ ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಹಾಗೂ ಸದಸ್ಯರು, ಊರಿನ ಹಿರಿಯರು ಮತ್ತು ಯುವ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಶ್ರೀದೇವಿ ನಾಯಕ್ ಅಭಿಮಾನಿ ಬಳಗದವರು ಹಾಗೂ ಸಾಮಾಜಿಕ ಜಾಲತಾಣದ ಸಂಚಾಲಕ ಅಭಿಷೇಕ ಪೂಜಾರ, ರಫಿ, ವಿಶ್ವರಾದ್ಯ ನಾಯಕ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು