2:24 AM Wednesday4 - February 2026
ಬ್ರೇಕಿಂಗ್ ನ್ಯೂಸ್
ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್…

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು