2:00 AM Friday4 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು