2:31 PM Wednesday5 - November 2025
ಬ್ರೇಕಿಂಗ್ ನ್ಯೂಸ್
ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:…

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು