3:19 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು