4:56 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ದೇವದುರ್ಗ ಮಲದಕಲ್ ಗ್ರಾಮ ಪಂಚಾಯತಿ ಗ್ರಾಮ ಸಭೆಯಲ್ಲಿ ಪಿಡಿಒ ನಾಪತ್ತೆ: ಮಾಹಿತಿ ನೀಡದೆ ಗೈರು; ಕ್ರಮಕ್ಕೆ ಆಗ್ರಹ

01/12/2023, 18:48

ರಮೇಶ್ ದೇವದುರ್ಗ ರಾಯಚೂರು

info.reporterkarnataka@gmail.com

ದೇವದುರ್ಗ ತಾಲ್ಲೂಕಿನ ಮಲದಕಲ್ ಗ್ರಾಮ ಪಂಚಾಯತಿಯಲ್ಲಿ ನಡೆಯಬೇಕಾಗಿದ್ದ ವಿವಿಧ ವಸತಿ ಯೋಜನೆಯಡಿಯಲ್ಲಿ ಫಲಾನುಭವಿಗಳ ಆಯ್ಕೆ ಕುರಿತು ಗ್ರಾಮ ಸಭೆಗೆ ಪಿಡಿಒ ರೇಣುಕಮ್ಮ ಗೈರು ಹಾಜರಾಗಿದ್ದಾರೆ.
ಗ್ರಾಮ ಸಭೆ ಇದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಸರ್ವ ಸದಸ್ಯರಿಗೆ ನೋಡಲಾಧಿಕಾರಿಗಳು
ನೋಟಿಸ್ ನೀಡಿದ್ದರು. ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮ ಪಂಚಾಯತಿ ಆವರಣದಲ್ಲಿ ಹಾಜರಾಗಿದ್ದರು. ಆದರೆ ಪಿಡಿಒ ರೇಣುಕಮ್ಮ ಅವರು ಗ್ರಾಮ ಸಭೆ ನೋಟಿಸ್ ಜಾರಿ ಮಾಡಿ ಪಂಚಾಯತಿಗೆ ಬಾರದೆ ಉಳಿದಿದ್ದಾರೆ. ಪಿಡಿಒ ರಜೆ ಪತ್ರ ನೀಡದೆ ಬೇರೆ ಅವರಿಗೆ ಗ್ರಾಮ ಸಭೆ ಮಾಡುವಂತೆ ತಿಳಿಸದೆ ಪಂಚಾಯತಿಗೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು, ಪಂಚಾಯತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಜನರು ಗ್ರಾಮ ಸಭೆಗೆ ಬಂದು ಕುಳಿತಿದ್ದರೂ ಕೂಡ ಪಿಡಿಒ ಅವರು ಬಾರದೆ ಇರುವುದು ಪಿಡಿಒ ಅವರ ನಿರ್ಲಕ್ಷ್ಯವಾಗಿದೆ. ಅವರ ಮೇಲೆ ಸಂಬಂಧಿಸಿದ ಮೇಲಾಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಎಂದು ಮರೆಪ್ಪ ಮಲದಕಲ್ ಅವರು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮ ಸಭೆ ನಡೆಸದೆ ವಾಪಸು ಹೋದರೆ ನೇರ ಹೊಣೆ ಪಿಡಿಒ ರೇಣುಕಮ್ಮ ಅವರು ಆಗಿರುತ್ತಾರೆ ಎಂದು ಗ್ರಾಮ ಪಂಚಾಯತಿ ಸದಸ್ಯ ಭೀಮರಡ್ಡಿ ನಾಯಕ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು