1:17 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್

26/12/2023, 10:47

ರಮೇಶ್ ದೇವದುರ್ಗ ರಾಯಚೂರು

info.reporterkarnarnataka@gmail.ಕಂ

ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖವಾಗಿ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಸಭಾ ಪಾಲಕರಾದ ರೇ. ರವಿ ಪ್ರಸಾದ್ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಯೇಸುವಿನ ಪ್ರತಿಮೆ ಮುಂದೆ ಭಕ್ತರು ಮೊಂಬತ್ತಿ ಹಿಡಿದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಉಗ್ರಾಣಿಕರಾದ ಯೇಶಪ್ಪ, ನಾಗಬಸಪ್ಪ, ದೇವಪುತ್ರಪ್ಪ, ಎವನಪ್ಪ, ಹನುಮಂತ, ಗಂಗಪ್ಪ, ಶಿಕ್ಷಕರಾದ ಪ್ರಕಾಶ ಹೊನ್ನಟಗಿ, ಶಾಂತಕುಮಾರ ಹೊನ್ನಟಗಿ, ಬಾಬು, ಮಾರೆಪ್ಪ, ಯಲ್ಲಪ್ಪ, ಭೀಮಣ್ಣ, ಬೂದೆಪ್ಪ, ಮಹೇಶ, ದೇವರಾಜ, ಅಬ್ರಾಂ, ಅನಿತಾ, ಮರಿಯಾಳಮ್ಮ, ಆಶಾ ಕಾರ್ಯಕರ್ತೆ ಲಲಿತಮ್ಮ, ಗಂಗಮ್ಮ, ಗೀತಾ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅನೇಕು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು