1:28 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ದೇವದುರ್ಗ ತಾಲೂಕಿನಾದ್ಯಂತ ಸಂಭ್ರಮದ ಕ್ರಿಸ್ಮಸ್ ಆಚರಣೆ: ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ಯಾರೊಲ್ಸ್

26/12/2023, 10:47

ರಮೇಶ್ ದೇವದುರ್ಗ ರಾಯಚೂರು

info.reporterkarnarnataka@gmail.ಕಂ

ಯೇಸುಕ್ರಿಸ್ತರ ಜನ್ಮದಿನವಾದ ಕ್ರಿಸ್‌ಮಸ್ ಹಬ್ಬವನ್ನು ದೇವದುರ್ಗ ತಾಲೂಕಿನಾದ್ಯಂತ ಕ್ರೈಸ್ತರು ಭಕ್ತಿ, ಶ್ರದ್ಧೆ, ಸಂಭ್ರಮದಿಂದ ಆಚರಿಸಿದರು.
ಭಾನುವಾರ ರಾತ್ರಿಯಿಂದಲೇ ತಾಲೂಕಿನ ಎಲ್ಲಾ ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ, ಕ್ರಿಸ್‌ಮಸ್ ಗೀತೆಗಳ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಪ್ರಮುಖವಾಗಿ ತಾಲೂಕಿನ ಹೊನ್ನಟಗಿ ಗ್ರಾಮದಲ್ಲಿ ಸಭಾ ಪಾಲಕರಾದ ರೇ. ರವಿ ಪ್ರಸಾದ್ ಇವರ ನೇತೃತ್ವದಲ್ಲಿ ಕ್ರಿಸ್ಮಸ್ ಹಬ್ಬವನ್ನು ಕೇಕ್ ಕತ್ತರಿಸುವ ಮೂಲಕ ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಯೇಸುವಿನ ಪ್ರತಿಮೆ ಮುಂದೆ ಭಕ್ತರು ಮೊಂಬತ್ತಿ ಹಿಡಿದು ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಉಗ್ರಾಣಿಕರಾದ ಯೇಶಪ್ಪ, ನಾಗಬಸಪ್ಪ, ದೇವಪುತ್ರಪ್ಪ, ಎವನಪ್ಪ, ಹನುಮಂತ, ಗಂಗಪ್ಪ, ಶಿಕ್ಷಕರಾದ ಪ್ರಕಾಶ ಹೊನ್ನಟಗಿ, ಶಾಂತಕುಮಾರ ಹೊನ್ನಟಗಿ, ಬಾಬು, ಮಾರೆಪ್ಪ, ಯಲ್ಲಪ್ಪ, ಭೀಮಣ್ಣ, ಬೂದೆಪ್ಪ, ಮಹೇಶ, ದೇವರಾಜ, ಅಬ್ರಾಂ, ಅನಿತಾ, ಮರಿಯಾಳಮ್ಮ, ಆಶಾ ಕಾರ್ಯಕರ್ತೆ ಲಲಿತಮ್ಮ, ಗಂಗಮ್ಮ, ಗೀತಾ, ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಅನೇಕು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು