12:22 PM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ

10/09/2021, 09:08

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಯಾ ಗ್ರಾಮದಲ್ಲಿ ಶಾಸಕರನ್ನು ಮಂಗಳವಾದ್ಯ ಪಟಾಕಿ ಸಿಡಿಸುವ ಮುಖಾಂತರ ಬರ ಮಾಡಿಕೊಂಡರು.

ನಾಗಮಂಗಲ ತಾಲೂಕಿನಲ್ಲಿ ಸುರೇಶ್ ಗೌಡರು ಈಗಾಗಲೇ ಸುಮಾರು ಹೋಬಳಿಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಚಾಲನೆ ನೀಡಿದ್ದು ಕುಡಿಯುವ ನೀರಿನ ಹರಿಕಾರರಾಗಿ ಜನರ ಬಾಯಲ್ಲಿ ಮನೆಮಾತಾಗಿದೆ.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಾದ ಯಡವನಹಳ್ಳಿ, ಅಂಕನಹಳ್ಳಿ, ಹಿದುವ,ದೊಡ್ಡಜಕ್ಕನಹಳ್ಳಿ ರಾಮೇನಹಳ್ಳಿ, ದಂಡೆಬಾಳ, ದೊಡ್ಡಉಪ್ಪಳ, ಹದಮಗೆರೆ, ಲಕ್ಕೇಗೌಡನ ಕೊಪ್ಪಲು. ದೇವಲಾಪುರ, ಕುಡುಗಬಾಳು, ಮದ್ದೇನಹಟ್ಟಿ, ದಂಡಿಗನಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕಾಮಗಾರಿ ಯೋಜನೆಗೆ ಗುದ್ದಲಿ ಪೂಜೆ ಮಾಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ಕೋಟಿ ರವಿ ಡೈಮಂಡ್ ನರಸಿಂಹಮೂರ್ತಿ ಆಯಾ ಗ್ರಾಮ ಅಧ್ಯಕ್ಷರು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು