7:13 AM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ದೇವಲಾಪುರ ಹೋಬಳಿ: ಕುಡಿಯುವ ನೀರಿನ ಕಾಮಗಾರಿಗೆ ಶಾಸಕ ಸುರೇಶ್ ಗೌಡ ಚಾಲನೆ

10/09/2021, 09:08

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ

info.reporterkarnataka@gmail.com

ನಾಗಮಂಗಲದ ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಯೋಜನೆಯನ್ನು ಕಾಮಗಾರಿಗೆ ಶಾಸಕ ಸುರೇಶ ಗೌಡ, ವಿಧಾನ ಪರಿಷತ್ ಸದಸ್ಯ ಅಪ್ಪಾಜಿ ಗೌಡ ಅವರು ಗುದ್ದಲಿ ಪೂಜೆ ಮಾಡುವ ಮುಖಾಂತರ ಚಾಲನೆ ನೀಡಿದರು.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಯಾ ಗ್ರಾಮದಲ್ಲಿ ಶಾಸಕರನ್ನು ಮಂಗಳವಾದ್ಯ ಪಟಾಕಿ ಸಿಡಿಸುವ ಮುಖಾಂತರ ಬರ ಮಾಡಿಕೊಂಡರು.

ನಾಗಮಂಗಲ ತಾಲೂಕಿನಲ್ಲಿ ಸುರೇಶ್ ಗೌಡರು ಈಗಾಗಲೇ ಸುಮಾರು ಹೋಬಳಿಗಳಲ್ಲಿ ಶುದ್ಧ ಕುಡಿಯುವ ನೀರಿಗೆ ಚಾಲನೆ ನೀಡಿದ್ದು ಕುಡಿಯುವ ನೀರಿನ ಹರಿಕಾರರಾಗಿ ಜನರ ಬಾಯಲ್ಲಿ ಮನೆಮಾತಾಗಿದೆ.

ದೇವಲಾಪುರ ಹೋಬಳಿಯ ವಿವಿಧ ಗ್ರಾಮಗಳಾದ ಯಡವನಹಳ್ಳಿ, ಅಂಕನಹಳ್ಳಿ, ಹಿದುವ,ದೊಡ್ಡಜಕ್ಕನಹಳ್ಳಿ ರಾಮೇನಹಳ್ಳಿ, ದಂಡೆಬಾಳ, ದೊಡ್ಡಉಪ್ಪಳ, ಹದಮಗೆರೆ, ಲಕ್ಕೇಗೌಡನ ಕೊಪ್ಪಲು. ದೇವಲಾಪುರ, ಕುಡುಗಬಾಳು, ಮದ್ದೇನಹಟ್ಟಿ, ದಂಡಿಗನಹಳ್ಳಿ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕಾಮಗಾರಿ ಯೋಜನೆಗೆ ಗುದ್ದಲಿ ಪೂಜೆ ಮಾಡಿದರು.

ಇದೇ ಸಂದರ್ಭದಲ್ಲಿ ಮಂಡ್ಯ ಹಾಲು ಒಕ್ಕೂಟ ನಿರ್ದೇಶಕ ಕೋಟಿ ರವಿ ಡೈಮಂಡ್ ನರಸಿಂಹಮೂರ್ತಿ ಆಯಾ ಗ್ರಾಮ ಅಧ್ಯಕ್ಷರು ಸದಸ್ಯರುಗಳು ಮುಖಂಡರು ಕಾರ್ಯಕರ್ತರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು