10:16 AM Friday13 - February 2026
ಬ್ರೇಕಿಂಗ್ ನ್ಯೂಸ್
ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ…

ಇತ್ತೀಚಿನ ಸುದ್ದಿ

ದೇವಲಾಪುರ ನಾಡ ಕಚೇರಿಗೆ ದಾನ ರೂಪದಲ್ಲಿ ಜಮೀನು ನೀಡಿದ ರೈತ ಕುಟುಂಬ 

19/09/2021, 20:14

ದೇವಲಾಪುರ ಜಗದೀಶ್ ನಾಗಮಂಗಲ ಮಂಡ್ಯ
info.reporterkarnataka@gmail.com

ದೇವಲಾಪುರ ಹೋಬಳಿ ಕೇಂದ್ರದಲ್ಲಿ ಸ್ವಂತ ಕಟ್ಟಡವಿಲ್ಲದೆ ಹಲವು ವರ್ಷಗಳಿಂದ ಒಂದೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಾಡ ಕಚೇರಿಗೆ ಸ್ವಂತ ಕಟ್ಟಡ ಕಟ್ಟಲು ಬೆಲೆಬಾಳುವ ಜಮೀನನ್ನು ನಾಗೇನಹಳ್ಳಿ ಶಿವಣ್ಣ ಎಂಬ ರೈತರು ದಾನ ಮಾಡಿದ್ದಾರೆ.

ಅವರಿಂದ ನಾಗಮಂಗಲ ತಾಲೂಕು ಉಪ ನೋಂದಣಿ ಕಚೇರಿಯಲ್ಲಿ ತಾಲೂಕು ದಂಡಾಧಿಕಾರಿಗಳ ಹೆಸರಿಗೆ ದೇವಲಾಪುರ ನಾಡಕಚೇರಿಯ ನಿವೇಶನಕ್ಕಾಗಿ ಬೆಲೆಬಾಳುವ ಜಾಗವನ್ನು ಬೆಂಗಳೂರು ಜಲಸೂರು ರಾಜ್ಯ ಹೆದ್ದಾರಿಯಲ್ಲಿ ದಾನ ರೂಪದಲ್ಲಿ ನೋಂದಣಿ ಮಾಡಿ ದಂಡಾಧಿಕಾರಿ ಕುಂಜಿ. ಅಹಮದ್  ಅವರಿಗೆ ಪತ್ರವನ್ನು ಹಸ್ತಾಂತರಿಸಿದರು.

ಇದೇ ಸಂದರ್ಭದಲ್ಲಿ ದಾನ ಮಾಡಿದ ರೈತ . ಕುಟುಂಬಸ್ಥರು ಶಿಲ್ಪಾ ನಂದೀಶ್, ಶಿವಣ್ಣ, ಜವರೇಗೌಡ, ಚಂದ್ರಮ್ಮ, ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ಮಧುಸೂದನ, ರಾಜಸ್ವನಿರೀಕ್ಷಕ ಉಮೇಶ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಜರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು