4:44 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ದೇವಾಲಯಗಳ ನೆಲಸಮ: ಬಿಜೆಪಿ ಸರಕಾರದ ಬಗ್ಗೆ ಕೆಪಿಸಿಸಿ ಪ್ಯಾನಲಿಸ್ಟ್  ವೆರೋನಿಕಾ ಕರ್ನೆಲಿಯೊ ಹೇಳಿದ್ದೇನು? 

16/09/2021, 16:53

ಉಡುಪಿ(reporterkarnataka.com): ಮೈಸೂರಿನಲ್ಲಿ ನಡೆದಿರುವ ದೇವಾಲಯಗಳ ಕೆಡಹುವಿಕೆ ಪ್ರಕ್ರಿಯೆ ನಿಜಕ್ಕೂ ಬೇಸರ ಹಾಗೂ ಭಕ್ತರ ಭಾವನೆಗಳಿಗೆ ನೋವು ತರುವ ಸಂಗತಿಯಾಗಿದ್ದು, ಇದನ್ನು ತಾನು ತೀವ್ರವಾಗಿ ಖಂಡಿಸುವುದಾಗಿ ಕೆಪಿಸಿಸಿ ಪ್ಯಾನಲಿಸ್ಟ್‌ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ.

ಒಂದು ದೇವಸ್ಥಾನ ಧಾರ್ಮಿಕ ಕೇಂದ್ರವಾಗಿದ್ದು ಅದರ ಮೇಲೆ ಭಕ್ತರಿಗೆ ತನ್ನದೆ ಆದ ಭರವಸೆ ನಂಬಿಕೆ ಇಟ್ಟುಕೊಂಡು ಅಲ್ಲಿ ಶಾಂತಿ ಸಮಾಧಾನವನ್ನು ಬಯಸಿಕೊಂಡು ಹೋಗುತ್ತಾರೆ. ಅಂತಹ ಒಂದು ಭಾವನಾತ್ಮಕ ಸಂಬಂಧವನ್ನು ಹೊಂದಿರುವ ದೇವಸ್ಥಾನವನ್ನು ಏಕಾಏಕಿ ಕೆಡಹುವುದು ಭಕ್ತರ ಭಾವನೆ ಮತ್ತು ಭಕ್ತಿಗೆ ಧಕ್ಕೆ ತರುವಂತಹ ವಿಚಾರವಾಗಿದೆ. ಒಂದು ವೇಳೆ ಅಂತಹ ದೇವಸ್ಥಾನ ಅನಧಿಕೃತ ಎಂದಾದಲ್ಲಿ ಅದನ್ನು ಕಟ್ಟುವಾಗಲೇ ಅದರ ಕುರಿತು ಕ್ರಮ ಜರುಗಿಸಬೇಕಾಗಿತ್ತು ಅದನ್ನು ಬಿಟ್ಟು ಇಷ್ಟು ವರ್ಷ ಆರಾಧಿಸಿಕೊಂಡು ಬಂದಿರುವಂತಹ ದೇವಸ್ಥಾನವನ್ನು ಕೆಡವಿದ್ದು ಸರಿಯಲ್ಲ. ಕೇಂದ್ರ, ರಾಜ್ಯ ಹಾಗೂ ಸ್ಥಳೀಯ ಹಂತಗಳಲ್ಲಿ ಬಿಜೆಪಿ ಸರಕಾರವೇ ಇದ್ದರೂ ಕೂಡ ಅದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಏಕೆ ಸಾಧ್ಯವಾಗಿಲ್ಲ. ಈ ಹಿಂದೆ ಕೂಡ ನ್ಯಾಯಾಲಯಗಳು ಇಂತಹ ಆದೇಶ ನೀಡಿದಾಗ ನ್ಯಾಯಾಲಯಕ್ಕೆ ಸರಕಾರದಿಂದ ಮನವರಿಕೆ ಮಾಡಿದಂಥಹ ಹಲವಾರು ಘಟನೆಗಳು ನಡೆದಿವೆ. ಹಾಗಿದ್ದರೂ ಕೂಡ ಬಿಜೆಪಿ ನಾಯಕರು ಈ ವಿಚಾರದಲ್ಲಿ ಮೌನವಾಗಿರುವುದು ಏಕೆ? ಬಿಜೆಪಿಗರು ಈ ವಿಚಾರದಲ್ಲಿ ಮೌನವಾಗಿದ್ದಾಗ ಕೂಡ ಸಂಘಟನೆಗಳು ಯಾಕೆ ಮಾತನಾಡುತ್ತಿಲ್ಲ ಬಿಜೆಪಿ ಸರಕಾರ ಇದ್ದಾಗ ದೇವರ ರಕ್ಷಣೆ ಮಾಡುವುದು ಸಾಧ್ಯವಿಲ್ಲವೇ? ಈ ವಿಚಾರದಲ್ಲಿ ಪ್ರತಿಯೊಬ್ಬ ಧರ್ಮದವರು ಕೂಡ ಪ್ರತಿಭಟಿಸಬೇಕಾದ ಪ್ರಮೇಯ ಒದಗಿ ಬಂದಿದೆ ಪ್ರತಿಯೊಬ್ಬರು ಅವರವರ ಧರ್ಮದ ರಕ್ಷಣೆ ಮಾಡುವ ಜವಾಬ್ದಾರಿ ಇದೆ.

ಇಷ್ಟೋಂದು ಪುರಾತನ ದೇವಾಲಯವನ್ನು ಜೆಸಿಬಿ ಮೂಲಕ ನೆಲಸಮ ಮಾಡಿದ್ದಲ್ಲದೆ ಅಲ್ಲಿದ್ದ ದೇವರ ಮೂರ್ತಿಗಳನ್ನು ಕಸದ ತೊಟ್ಟಿಗೆ ಎಸೆದಿರುವುದುನ್ನು ನೋಡಿದರೆ ಪ್ರತಿಯೊಬ್ಬರ ಮನಸ್ಸಿಗೂ ಕೂಡ ನೋವುಂಟು ಮಾಡುತ್ತದೆ. ರಾಜ್ಯದಲ್ಲಿ ಬಿಜೆಪಿ ಸರಕಾರವೇ ಅಧಿಕಾರದಲ್ಲಿರುವಾಗ ಇಂತಹ ಘಟನೆ ನಡೆದಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಿಂದೂ ಧರ್ಮದ ರಕ್ಷಣೆಯನ್ನು ಗುತ್ತಿಗೆ ಪಡೆದವರ ರೀತಿ ಮಾತನಾಡುತ್ತಿದ್ದ ಬಿಜೆಪಿಗೆ ಇಂತಹ ದುಸ್ಸಾಹಸ ಮಾಡುವ ಮೊದಲು ಹಿಂದುತ್ವ ರಕ್ಷಣೆಯ ನೆ‌ನಪಾಗದೇ ಇರುವುದು ಮಾತ್ರ ಬೇಸರದ ವಿಚಾರವಾಗಿದೆ.

ಜನರ ಭಾವನಾತ್ಮಕ ಧಾರ್ಮಿಕ ಭಾವನೆಗಳಿಗೆ ಬಿಜೆಪಿ ಸರ್ಕಾರ ಧಕ್ಕೆ ತರುತ್ತಿದ್ದು, ಇದೇ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದ್ದರೆ ಇದೇ ಬಿಜೆಪಿ ನಾಯಕರು ಬೀದಿಗೆ ಬಂದು ಹೋರಾಟ ಮಾಡುತ್ತಿದ್ದರು. ಆದರೆ ಇವರದ್ದೇ ಬಿಜೆಪಿ ಸರಕಾರ ಆಡಳಿತದಲ್ಲಿ ಇರುವಾಗ ಇದರ ಬಗ್ಗೆ ಪ್ರತಿಕ್ರಿಯಿಸಿದೇ ಇರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ಮಾಧ್ಯಮ ಪ್ರಕಟಣೆಯ ಮೂಲಕ ಕಿಡಿಕಾರಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು