5:37 PM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ದೇವರ ಮನೆಗೆ ಬರುವ ಪ್ರವಾಸಿಗರಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ: ಪೊಲೀಸರಿಂದ ಎಚ್ಚರಿಕೆ

23/01/2023, 15:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ರವಾಸಿ ತಾಣ ಹಾಗೂ ಐತಿಹಾಸಿಕ ಸ್ಥಳ ದೇವರಮನೆಯಲ್ಲಿ ಕೆಲ ಪ್ರವಾಸಿಗರ ಉಪಟಳದಿಂದ ಬಣಕಲ್ ಗ್ರಾಮಸ್ಥರಿಗೆ ಕಿರಿಕಿರಿ ಉಂಟಾಗಿದೆ.
ಭಾನುವಾರ ದೇವರಮನೆಯಲ್ಲಿ ಕೆಲ ಪ್ರವಾಸಿಗರು ಅನುಚಿತವಾಗಿ ವರ್ತಿಸಿದ್ದು ಗ್ರಾಮಸ್ಥರು ಆ ಪ್ರವಾಸಿಗರನ್ನು ತರಾಟೆಗೆ ತೆಗೆದುಕೊಂಡು ಬಣಕಲ್ ಠಾಣೆಯಲ್ಲಿ ಪೊಲೀಸರ ಸಮ್ಮುಖದಲ್ಲಿ ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಬಣಕಲ್ ಗ್ರಾಮಸ್ಥರಾದ ಬಿ.ಎಸ್ ವಿಕ್ರಂ, ದೇವರಮನೆ ಪ್ರವಾಸಿತಾಣಕ್ಕೆ ಬರುತ್ತಿರುವ ಕೆಲ ಪ್ರವಾಸಿಗರು ಮದ್ಯಪಾನ ಮತ್ತು ಮಾದಕ ವ್ಯಸನ ಮಾಡುತ್ತಿದ್ದು ದೇವರಮನೆಯಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ನಿಸರ್ಗ ರಮಣೀಯ ತಾಣ ದೇವರ ಮನೆಯಲ್ಲಿ ಮೋಜುಮಸ್ತಿಯಲ್ಲಿ ತೊಡಗುತ್ತಿದ್ದು ಇದರಿಂದ ಬಣಕಲ್ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಕೇಕೆ ಹಾಕುವುದು‌ ಮದ್ಯ ಬಾಟಲಿಗಳನ್ನು ಒಡೆದು ಹಾಕುವುದು ಮುಂತಾದ ಕೆಲಸಗಳನ್ನು‌ ಕೆಲ ಪ್ರವಾಸಿಗರು ಮಾಡುತ್ತಿದ್ದಾರೆ.

ದೇವರಮನೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಕಿಡಿಗೇಡಿಗಳ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ. ರಾತ್ರಿ ಸಮಯದಲ್ಲೂ ಕೆಲ ಪ್ರವಾಸಿಗರು ದೇವರಮನೆಗೆ ಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕಿದೆ. ದೇವರಮನೆಗೆ ಸಾಗುವ ರಸ್ತೆಯುದ್ದಕ್ಕೂ ಪ್ಲಾಸ್ಟಿಕ್, ಮದ್ಯ ಬಾಟಲಿಯನ್ನು ಎಸೆಯುವುದು ನಡೆಯುತ್ತಿದೆ. ಇದರಿಂದಾಗಿ ಪರಿಸರ ಮಾಲಿನ್ಯವಾಗುತ್ತಿದ್ದು ಗ್ರಾಮಸ್ಥರಿಗೂ ಕಿರಿಕಿರಿಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು