8:21 PM Thursday16 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ… ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು

ಇತ್ತೀಚಿನ ಸುದ್ದಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಉಚಿತ ಹೊಲಿಗೆ ಯಂತ್ರ ವಿತರಣೆ

25/11/2024, 15:27

ಮಂಗಳೂರು(reporterkarnataka.com):ದಕ್ಷಿಣ ಕನ್ನಡ ಜಿಲ್ಲೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ (ನಿ.) ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರವನ್ನು ಶಾಸಕ ವೇದವ್ಯಾಸ್ ಕಾಮತ್ ರವರು ವಿತರಿಸಿದರು.

ನಂತರ ಮಾತನಾಡಿದ ಶಾಸಕರು, ಮಹಿಳೆಯರು ಮನೆಯಲ್ಲೇ ಕುಳಿತು ಮಾಡುವ ಉದ್ಯೋಗದಲ್ಲಿ ಹೊಲಿಗೆಗೆ ಗ್ರಾಮೀಣ ಭಾಗದಿಂದ ಹಿಡಿದು ನಗರ ಭಾಗದವರೆಗೆ ಸದಾ ಬೇಡಿಕೆಯಿರುತ್ತದೆ. ಅನೇಕರ ಬಾಳಿಗೆ ಬೆಳಕಾಗಿರುವ ಈ ಹೊಲಿಗೆ ಯಂತ್ರವನ್ನು ಆರ್ಥಿಕ ಕಾರಣಗಳಿಂದಾಗಿ ಖರೀದಿಸುವ ಸಾಮರ್ಥ್ಯ ಹಲವರಿಗೆ ಇರುವುದಿಲ್ಲವಾಗಿದ್ದು ಇಂದು ಹೊಲಿಗೆ ಯಂತ್ರವನ್ನು ಪಡೆದಿರುವ ಈ ನಮ್ಮೆಲ್ಲ ಸಹೋದರಿಯರು ಸ್ವಾವಲಂಬಿಯಾಗಿ ಬದುಕು ನಡೆಸುವಂತಾಗಲಿ ಎಂದು ಹಾರೈಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳ ಸಹಿತ ಅನೇಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು