10:54 PM Thursday13 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಲಕರಣೆ ವಿತರಣೆ

09/12/2024, 20:48

ಬಂಟ್ವಾಳ(reporterkarnataka.com): ಆರ್ಥಿಕವಾಗಿ ಹಿಂದುಳಿದ ಅರ್ಹ ಫಲಾನುಭವಿಗಳಿಗೆ ಸರಕಾರವು ವಿವಿಧ ಸಲಕರಣೆಗಳನ್ನು ನೀಡುತ್ತಿದ್ದು, ಅದನ್ನು ಪಡೆದುಕೊಂಡವರು ತಮ್ಮ ಆದಾಯಕ್ಕೆ ಪೂರಕವಾಗಿ ಬಳಸಿಕೊಂಡು ಸ್ವಾಭಿಮಾನದ ಜೀವನ ನಡೆಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು.
ಅವರು ತಮ್ಮ ಕಚೇರಿಯಲ್ಲಿ ಕಾರ್ಮಿಕ ಇಲಾಖೆ ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಅರ್ಹ ಫಲಾನುಭವಿಗಳಿಗೆ ಮಂಜೂರಾದ ವಿವಿಧ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಪ್ರಸ್ತುತ ಅರ್ಜಿ ಹಾಕಿರುವ ೧೨೬ ಮಂದಿಯ ಪೈಕಿ ಸರಕಾರದ ಗುರಿಯಂತೆ ೩೬ ಮಂದಿಗೆ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಟೈಲರಿಂಗ್ ಯಂತ್ರ ನೀಡಲಾಗಿದ್ದು, ಮುಂದೆ ಮತ್ತೆ ಯಂತ್ರ ಮಂಜೂರಾದಾಗ ಉಳಿದ ಅರ್ಹರನ್ನು ಆಯ್ಕೆ ಮಾಡಲಾಗುತ್ತದೆ.


ಕಾರ್ಮಿಕ ಇಲಾಖೆಯ ಮೂಲಕ ಬಂಟ್ವಾಳ ಕ್ಷೇತ್ರದಲ್ಲಿ ಪ್ರಸ್ತುತ ೩೧೮ ಮಂದಿ ಮೇಸ್ತ್ರಿ ಗಳಿಗೆ ಕಿಟ್, ೧೦೧ ಮಂದಿ ವೆಲ್ಡರ್‌ಗಳಿಗೆ ಕಿಟ್ ಹಾಗೂ ೬೩ ಮಂದಿ ಎಲೆಕ್ಟ್ರೀಷಿಯನ್ ಗಳಿಗೆ ಸೇರಿ ಒಟ್ಟು ೪೮೨ ಮಂದಿಗೆ ಕಿಟ್ ಮಂಜೂರಾಗಿದ್ದು, ಫಲಾನುಭವಿಗಳಿಗೆ ಸಾಂಕೇತಿಕವಾಗಿ ಕಿಟ್ ವಿತರಿಸಲಾಯಿತು. ಜತೆಗೆ ೩೬ ಮಂದಿ ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ನೀಡಲಾಯಿತು.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್, ಬಂಟ್ವಾಳ ಕಾರ್ಮಿಕ ನಿರೀಕ್ಷಕಿ ಲವಿನಾ ಡಿಸೋಜ, ಕಚೇರಿ ಸಹಾಯಕರಾದ ಶಶಿಧರ, ಮುರಳಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು