8:25 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ 

03/01/2022, 22:13

ಮಂಗಳೂರು(reporterkarnataka.com):

ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ಸರ್ಕಾರದ ಹಸ್ತಕ್ಷೇಪ ಇರದೇ, ಅಲ್ಲಿನ ಅಭಿವೃದ್ಧಿ ಅಲ್ಲೇ ಆಗಬೇಕಾಗಿದೆ.

ಆದರೆ ಕಾಂಗ್ರೆಸ್ ಈ ವಿಚಾರದಲ್ಲಿ ರಾಜಕಾರಣ ಮಾಡ್ತಿದೆ, ಕಾಂಗ್ರೆಸ್ ಹಿಂದೂ ವಿರೋಧಿ ನೀತಿ ಹೊಂದಿದೆ ಎಂದು ಟೀಕಿಸಿದರು.

ಮತಾಂತರ ಕಾಯ್ದೆ, ಸಿಎಎ ಕಾಯ್ದೆ, ಈಗ ದೇವಸ್ಥಾನ ಸ್ವಾಯತ್ತೆಗೂ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಪಸಂಖ್ಯಾತ ಮತಕ್ಕಾಗಿ ಹಿಂದೂ ಸಮಾಜಕ್ಕೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದೆ.ಕಾಂಗ್ರೆಸ್ ಗೆ ಹಿಂದೂ ಧರ್ಮ, ಹಿಂದೂ ಜನರ ಮೇಲೆ ನಂಬಿಕೆ ಇಲ್ಲ ಎಂದರು.

ಬೊಮ್ಮಾಯಿ ನಿರ್ಧಾರ ಸರಿ ಇದೆ, ಎಲ್ಲಾ ಮಠಾಧೀಪತಿಗಳು, ದೇವಸ್ಥಾನದವರು ಇದನ್ನ ಸ್ವಾಗತಿಸಿದ್ದಾರೆ. ಮತಾಂತರ ಮತ್ತು ದೇವಸ್ಥಾನ ವಿಚಾರದಲ್ಲಿ ಸರ್ಕಾರದ ನಿರ್ಧಾರ ನಾನು ಸ್ವಾಗತಿಸುತ್ತೇನೆ ಎಂದು ಅವರು ನುಡಿದರು.

ಸಿದ್ದರಾಮಯ್ಯ ಟೀಕೆ ಮಾಡ್ತಿದಾರೆ, ಆದ್ರೆ ಟಿಪ್ಪು ಜಯಂತಿ ಯಾರ ಓಲೈಕೆಗೆ ಮಾಡಿದ್ದು? ಶಾದಿ ಭಾಗ್ಯ ಯೋಜನೆಯಲ್ಲೂ ಅಲ್ಪಸಂಖ್ಯಾತರನ್ನ ಹುಡುಕಿ ಮತೀಯ ಭಾವನೆ ತಂದಿದ್ದಾರೆ. ಕಾಂಗ್ರೆಸ್ ಸಂಪೂರ್ಣ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಅಹಿಂದ ಚಳುವಳಿ ಮಾಡಿದ್ರಿ, ಆದ್ರೆ ಪ್ರಶಾಂತ್ ಪೂಜಾರಿ, ಶರತ್ ಮಡಿವಾಳ, ಪುಟ್ಟಪ್ಪ ಸತ್ತಾಗ ಏನ್ ಮಾಡಿದ್ರಿ? ಕಾಂಗ್ರೆಸ್ ನ ಈ ವಿರೋಧಿ ಧೋರಣೆಯನ್ನ ಹಿಂದೂ ಸಮಾಜ‌ ತಿರಸ್ಕರಿಸುತ್ತೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು