11:21 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ದೇವೇಗೌಡ ಕುಟುಂಬ ಬಗ್ಗೆ ಅವಹೇಳನ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ವಿರುದ್ಧ ಯುವ ಜೆಡಿಎಸ್ ಪ್ರದರ್ಶನ

31/01/2023, 20:23

ಮಂಗಳೂರು(reporterkarnataka.com): ಮಾಜಿ ಪ್ರಧಾನಿ, ಜನತಾ ದಳ ಹಿರಿಯ ನಾಯಕ ಎಚ್. ಡಿ. ದೇವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ದ ದಕ್ಷಿಣ ಕನ್ನಡ ಜಿಲ್ಲಾ ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಅವರ ನೇತೃತ್ವದಲ್ಲಿ ನಗರದ ಸರ್ಕಿಟ್ ಹೌಸ್ ಬಳಿ ಮುತ್ತಿಗೆ ಹಾಕಿ ಕಪ್ಪು ಬಾವುಟವನ್ನು ಪ್ರದರ್ಶಿಸಲಾಯಿತು.
ನಂತರ ಮಾತನಾಡಿದ ಅಕ್ಷಿತ್ ಸುವರ್ಣ ಅವರು,
ದೇಶದ ಪ್ರಧಾನಿ ಆಗಿ ದೇವೇಗೌಡರು ನೀಡಿರುವ ಕೊಡುಗೆಯನ್ನು ನಳಿನ್ ಮರೆತಿರಬಹುದು. ಆದರೆ, ದೇಶದ ಜನರು ಮರೆತಿಲ್ಲ. ರಾಜ್ಯದ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿರುವ ದೇವೇಗೌಡರ ಬಗ್ಗೆ ಕೀಳಾಗಿ ಮಾತನಾಡಿರುವ ನಳಿನ್ ಕುಮಾರ್ ಕಟೀಲ್ ಅವರ ವರ್ತನೆ ಖಂಡನೀಯ ಎಂದರು.
ರಾಜಕೀಯದಲ್ಲಿ ತಮ್ಮದೇ ಕೊಡುಗೆ ನೀಡಿರುವ ದೇವೇಗೌಡರ ಕುಟುಂಬ ಹಾಗೂ ಜೆಡಿಎಸ್ ಪಕ್ಷದ ವಿರುದ್ದ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ದೇವೆಗೌಡರ ಕೊಡುಗೆ ಕನಿಷ್ಠ ಒಂದು ಪಾಲು ಸೇವೆಯನ್ನು ನೀಡದ ಇವರಿಗೆ ಗೌಡರ ಕುಟುಂಬದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ ಎಂದು ನುಡಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಶಾಸಕರನ್ನು ಖರೀದಿ ಮಾಡಿ ಅನೈತಿಕವಾಗಿ ಸರಕಾರ ರಚನೆ ಮಾಡಿದ್ದು ಬಿಟ್ಟರೆ ಇವರ ಸಾಧನೆ ಬೇರೆ ಏನು ಇಲ್ಲ. ಕೂಡಲೇ ಅವರು ದೇವೆಗೌಡರ ಕ್ಷಮೆಯನ್ನು ಯಾಚಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅವರು ಭಾಗವಹಿಸುವ ಎಲ್ಲಾ ಕಾರ್ಯಕ್ರಮದಲ್ಲಿ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು
ಅಕ್ಷಿತ್ ಸುವರ್ಣ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಯುವ ಜಿಲ್ಲಾ ಜೆಡಿಎಸ್ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ಹಾಗೂ ಜಿಲ್ಲಾ ಸಂಘಟನಾ ಉಸ್ತುವಾರಿ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು, ಯುವ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನಯ್, ಗೌತಮ್, ವಿನಿತ್, ರಿನಿತ್, ನಿಶಾಂತ್, ಗಗಾಣೀಶ್ ,ಪ್ರದೀಪ್ ಕೀರ್ತಿಕ್, ಪವನ್, ಧನುಷ್, ಸುಶಾಂತ್, ವಿನಯ್ ,ಜಯದೀಪ್ ಧನುಷ್ ಪೂಜಾರಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು