10:18 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ದೇವೇಗೌಡ್ರು ವಿರೋಧ ಪಕ್ಷದ ನಾಯಕರಾಗಿದ್ರು, ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ?: ಸಿದ್ದರಾಮಯ್ಯ ಪ್ರಶ್ನೆ

13/10/2021, 17:33

ಬೆಂಗಳೂರು(reporterkarnataka.com): ದೇವರಾಜ ಅರಸ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಚ್. ಡಿ. ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ..?

ಇದು ಮಾಜಿ ಮುಖ್ಯಮಂತ್ರಿ  ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಶ್ನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಕ್ಷೇಪಾರ್ಹ ಹೇಳಿಕೆಗೆ ಕೆಂಡಾಮಂಡಲವಾದ ಸಿದ್ದರಾಮಯ್ಯ ಈ ಪ್ರಶ್ನೆ ಹಾಕಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಇಂತಹ ಬೆದರಿಕೆಗೆ ಜಗ್ಗವವನ್ನಲ್ಲ. 1971ರಲ್ಲಿ ನಾನು ಕಾನೂನು ವಿದ್ಯಾರ್ಥಿಯಾಗಿದ್ದಾಗ ರಾಜಕೀಯ ಪ್ರವೇಶಿಸಿದ್ದೇನೆ. 50 ವರ್ಷಗಳ ರಾಜಕೀಯ ಮಾಡಿದ್ದೇನೆ. ಕುಮಾರಸ್ವಾಮಿಯವರು ಯಾವಾಗ ರಾಜಕೀಯಕ್ಕೆ ಬಂದ್ರು? ದೇವೇಗೌಡ ಅವರು ಮುಖ್ಯಮಂತ್ರಿಯಾದ ಬಳಿಕ 1997ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದ್ರು. ಒಬ್ಬ ಮಾಜಿ ಮುಖ್ಯಮಂತ್ರಿ ತುಂಬಾ ಲಘುವಾಗಿ ಮಾತನಾಡಬಾರದು. ಸಾಂವಿಧಾನಿಕ ಹುದ್ದೆಯ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು