11:02 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದೇವೇಗೌಡ್ರು ವಿರೋಧ ಪಕ್ಷದ ನಾಯಕರಾಗಿದ್ರು, ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ?: ಸಿದ್ದರಾಮಯ್ಯ ಪ್ರಶ್ನೆ

13/10/2021, 17:33

ಬೆಂಗಳೂರು(reporterkarnataka.com): ದೇವರಾಜ ಅರಸ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಚ್. ಡಿ. ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ..?

ಇದು ಮಾಜಿ ಮುಖ್ಯಮಂತ್ರಿ  ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಶ್ನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಕ್ಷೇಪಾರ್ಹ ಹೇಳಿಕೆಗೆ ಕೆಂಡಾಮಂಡಲವಾದ ಸಿದ್ದರಾಮಯ್ಯ ಈ ಪ್ರಶ್ನೆ ಹಾಕಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಇಂತಹ ಬೆದರಿಕೆಗೆ ಜಗ್ಗವವನ್ನಲ್ಲ. 1971ರಲ್ಲಿ ನಾನು ಕಾನೂನು ವಿದ್ಯಾರ್ಥಿಯಾಗಿದ್ದಾಗ ರಾಜಕೀಯ ಪ್ರವೇಶಿಸಿದ್ದೇನೆ. 50 ವರ್ಷಗಳ ರಾಜಕೀಯ ಮಾಡಿದ್ದೇನೆ. ಕುಮಾರಸ್ವಾಮಿಯವರು ಯಾವಾಗ ರಾಜಕೀಯಕ್ಕೆ ಬಂದ್ರು? ದೇವೇಗೌಡ ಅವರು ಮುಖ್ಯಮಂತ್ರಿಯಾದ ಬಳಿಕ 1997ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದ್ರು. ಒಬ್ಬ ಮಾಜಿ ಮುಖ್ಯಮಂತ್ರಿ ತುಂಬಾ ಲಘುವಾಗಿ ಮಾತನಾಡಬಾರದು. ಸಾಂವಿಧಾನಿಕ ಹುದ್ದೆಯ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು