5:01 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ ಭರವಸೆ

12/12/2025, 21:23

ಬೆಳಗಾವಿ, ಸುವರ್ಣ ವಿಧಾನಸೌಧ
(reporterkarnataka.com):
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಲು ಏಕಗವಾಕ್ಷಿ ಏಜೆನ್ಸಿ ವತಿಯಿಂದ ಅನುಮೋದನೆ ಪಡೆದು ಬೆಂಗಳೂರಿನ ಐಡೆಕ್ ಸಂಸ್ಥೆಯನ್ನು ವ್ಯವಹರಣಾ ಸಮಾಲೋಚಕರನ್ನಾಗಿ ನೇಮಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕ ಸಚಿವರ ಪರವಾಗಿ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ಶೃಂಗೇರಿ ಕ್ಷೇತ್ರದ ಶಾಸಕ ರಾಜೇಗೌಡ ಟಿ.ಡಿ ಅವರು ಸಾಂಬಾರು ಪದಾರ್ಥಗಳ ರಫ್ತು ಅಭಿವೃದ್ಧಿ ಮತ್ತು ಬೆಳವಣಿಗೆಗೆ ಸೂಕ್ತವಾದ ಮೂಲ ಸೌಕರ್ಯಕ್ಕೆ ಸ್ಪೈಸ್ ಪಾರ್ಕ್ ಅಗತ್ಯವಾಗಿದ್ದು, ಆದಷ್ಟು ಬೇಗ ಸ್ಪೈಸ್ ಪಾರ್ಕ್ ಅಭಿವೃದ್ಧಿಪಡಿಸಬೇಕೆಂದು ವಿಧಾನಸಭೆಯಲ್ಲಿ ಮನವಿ ಮಾಡಿದರು.
ಸ್ಪೈಸ್ ಪಾರ್ಕ್ ಅಭಿವೃದ್ಧಿಗೆ ಗುರುತಿಸಲಾಗಿದ್ದ ಜಾಗದ ಭೌತಿಕ ಪರಿಶೀಲನೆಯನ್ನು ಸಾಂಬಾರು ಮಂಡಳಿ, ತೋಟಗಾರಿಕೆ ಇಲಾಖೆ, ಕಂದಾಯ ಇಲಾಖೆ ಹಾಗೂ ಕೈಗಾರಿಕೆ ಇಲಾಖೆಯ ಅಧಿಕಾರಿಗಳು ಕೈಗೊಂಡಾಗ, ಸದರಿ ಜಾಗವು ಸ್ಪೈಸ್ ಪಾರ್ಕ್ ನಿರ್ಮಾಣ ಮಾಡಲುಲ ಸೂಕ್ತವಾಗದೇ ಇರುವ ಹಿನ್ನೆಲೆಯಲ್ಲಿ ಸೂಕ್ತವಾದ ಪರ್ಯಾಯ ಜಾಗವನ್ನು ನೀಡಲು ಕೋರಲಾಗಿತ್ತು. ಅದರಂತೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕು ಗೋಣಿಬೀಡು ಹೋಬಳಿ ಲಲಬೆಟ್ಟದಮನೆ ಗ್ರಾಮದಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ ಉದ್ದೇಶಕ್ಕಾಗಿ ತೋಟಗಾರಿಕೆ ಇಲಾಖೆಗೆ ಭೂಮಿ ವರ್ಗಾಯಿಸಿ, ದಿನಾಂಕ 30-5-2025ರಂದು ಆದೇಶ ಹೊರಡಿಸಲಾಗಿದೆ. ಜಮೀನಿನ ಹದ್ದುಬಸ್ತು ಗುರುತಿಸುವಿಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಪ್ರಸ್ತುತ ವ್ಯವಹರಣಾ ಸಮಾಲೋಚಕರನ್ನು ನೇಮಿಸಿ ವರದಿಯನ್ನು ಸಿದ್ದಪಡಿಸಲು ಸೂಚಿಸಲಾಗಿರುತ್ತದೆ. ವರದಿ ಬಂದ ಕೂಡಲೇ ಆದಷ್ಟು ಶೀಘ್ರವಾಗಿ ಸ್ಪೈಸ್ ಪಾರ್ಕ್ ಕಾರ್ಯಾರಂಭಗೊಳಿಸಲಾಗುವುದು ಎಂದು ವಿಧಾನಸಭೆಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು