7:06 PM Sunday19 - April 2026
ಬ್ರೇಕಿಂಗ್ ನ್ಯೂಸ್
ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು…

ಇತ್ತೀಚಿನ ಸುದ್ದಿ

ಚಂದ್ರಮೌಳೇಶ್ವರ ಜಾತ್ರಾ ಮಹೋತ್ಸವದಲ್ಲಿ ಮಕ್ಕಳಿಗೆ ಜಂತುಹುಳು ಮಾತ್ರೆ: ಶಾಸಕ ಅನಿಲ್ ಚಿಕ್ಕಮಾದು ಚಾಲನೆ

13/02/2026, 14:32

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಮಾನ್ಯ ಅರಣ್ಯ ಮತ್ತು ವಿಹಾರ ಧಾಮದ ಅಧ್ಯಕ್ಷರು ಹಾಗೂ ಶಾಸಕ ಅನಿಲ್ ಚಿಕ್ಕಮಾದು ರವರು ಮಕ್ಕಳಿಗೆ ಜಂತುಹುಳು ಮಾತ್ರೆ ನೀಡುವುದರ ಮೂಲಕ ಚಾಲನೆಯನ್ನು ನೀಡಿದರು.


ಸಂದರ್ಭದಲ್ಲಿ ಮಾತನಾಡಿ 1-19 ವರ್ಷದ ಮಕ್ಕಳಿಗೆ, ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಜಂತುಹುಳು ಮಾತ್ರೆಯನ್ನು ನೀಡುತ್ತಿದ್ದೇವೆ, ನಮ್ಮ ತಾಲ್ಲೂಕಿನ ಅಂಗನವಾಡಿ ಮತ್ತು ಶಾಲೆಯ ಎಲ್ಲ ಮಕ್ಕಳಿಗೂ ಕಡ್ಡಾಯವಾಗಿ ಮಾತ್ರೆಯನ್ನು ನೀಡಿ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ತಿಳಿಸಿದರು.
ನಂತರ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ. ರವಿಕುಮಾರ್ ಟಿ.ರವರು ಮಾತನಾಡಿ ಈ ದಿನ ರಾಜ್ಯದ್ಯಂತ ರಾಷ್ಟ್ರೀಯ ಜಂತು ಹುಳು ನಿವಾರಣ ದಿನ ಕಾರ್ಯಕ್ರಮವನ್ನು ಮಾಡುತ್ತಿದ್ದೇವೆ. ಎಚ್ ಡಿ ಕೋಟೆ ತಾಲೂಕಿನಲ್ಲಿ ಒಟ್ಟು 252 ಅಂಗನವಾಡಿಗಳಲ್ಲಿ 7355 ಮಕ್ಕಳು, 151 ಶಾಲೆಗಳಲ್ಲಿ 21 735 ಮಕ್ಕಳುಗಳಿದ್ದು ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಜಂತುಹುಳು ನಿವಾರಣ ಮಾತ್ರೆಯನ್ನು ನೀಡುತ್ತಿದ್ದೇವೆ ಹಾಗೂ ದಿನಾಂಕ 16.2.2026ರಂದು ಮಾಪಾ ಆಫ್ ಡೇ ಎಂದು ಮಾಡಿ ಈ ದಿನ ಬಿಟ್ಟು ಹೋಗಿರೋ ಮಕ್ಕಳಿಗೆ ದಿನಾಂಕ 16 ರಂದು ನೀಡುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿನಗರ ಸಭೆ ಸದಸ್ಯರಾದ ಪ್ರದೀಪ್ ಕುಮಾರ್. ಗ್ರಾಮ ಅಧ್ಯಕ್ಷರಾದ ಮಹೇಶ್, ಊರಿನ ಮುಖಂಡರಾದ ಮಂಚ್ಚಯ್ಯ, ಮಾಜಿ ಅಧ್ಯಕ್ಷರಾದ ದಿನೇಶ್ , ವೈದ್ಯಾಧಿಕಾರಿಗಳಾದ ಡಾ.ಚಂದ್ರಕಲ, ಸಿಬ್ಬಂದಿ ವರ್ಗದವರಾದ ರವಿರಾಜ್, ದೊರೆ, ಜಯಂತಿ, ಶಶಿಕಲಾ, ಗ್ರಾಮದ ಮುಖಂಡರು, ಮಕ್ಕಳು, ಇನ್ನಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು