4:35 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಧಾರವಾಡ: ಯುವ ಗಾಯಕ ಪ್ರಜ್ವಲ್ ಪುಟಾಣಿಗೆ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

04/03/2024, 12:12

ಸಂತೋಷ ಹ.ಹೊಸಟ್ಟಿ ಉರು ಮೂಡಲಗಿ ಬೆಳಗಾವಿ

info.reporterkarnataka@gmail.com

ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ನಡೆದ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವ ಗಾಯಕ ಪ್ರಜ್ವಲ್ ಪುಟಾಣಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚೇತನ್ ಫೌಂಡೇಶನ್ ಕರ್ನಾಟಕ ವತಿಯಿಂದ ಸಂಗೀತ ಸಾಮ್ರಾಟ, ಗಾನ ವಿಶಾರದ ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ 110ನೇ ಜಯಂತ್ಯೋತದ ಅಂಗವಾಗಿ ನಡೆದ ಸಂಗೀತ ಸೌರಭ ಕಾರ್ಯಕ್ರಮ ಒಟ್ಟು 42 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯುವ ಗಾಯಕರಾದ ಪ್ರಜ್ವಲ್ ಪುಟಾಣಿ ಅವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಜ್ವಲ್,
ಪದ್ಮಭೂಷಣ ಪುಟ್ಟರಾಜ ಗವಾಯಿ ರಾಷ್ಟ್ರೀಯ ಪ್ರಶಸ್ತಿ ನನಗೆ ಕೊಟ್ಟು ಗೌರಿಸಿದವರಿಗೆ ಧನ್ಯವಾದಗಳು. ಪ್ರಶಸ್ತಿ ಕೊಡಲು ಮತ್ತು ನನಗೆ ಬೆಳೆಯಲು ಅನುಕೂಲ ಮಾಡಿಕೊಟ್ಟ ಬೆಳಗಾವಿಯ
ಸಮಾಜ ಸೇವಕರಾದ ಡಾ. ವಿಜಯ ಅಣ್ಣ ಜಂಬಗಿ ಹಾಗೂ
ಚೇತನ್ ಫೌಂಡೇಶನ್ ಕರ್ನಾಟಕದ ಅಧ್ಯಕ್ಷರಾದ
ಚಂದ್ರಶೇಖರ್ ಮಾಡಲಗೇರಿ ಅವರಿಗೆ ವಂದನೆಗಳು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು