3:03 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಧಾರವಾಡ: ಯುವ ಗಾಯಕ ಪ್ರಜ್ವಲ್ ಪುಟಾಣಿಗೆ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

04/03/2024, 12:12

ಸಂತೋಷ ಹ.ಹೊಸಟ್ಟಿ ಉರು ಮೂಡಲಗಿ ಬೆಳಗಾವಿ

info.reporterkarnataka@gmail.com

ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಚೇತನ ಫೌಂಡೇಶನ್ ಕರ್ನಾಟಕ ವತಿಯಿಂದ ನಡೆದ ಪದ್ಮಭೂಷಣ ಪುಟ್ಟರಾಜ ಕವಿಗವಾಯಿ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುವ ಗಾಯಕ ಪ್ರಜ್ವಲ್ ಪುಟಾಣಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಚೇತನ್ ಫೌಂಡೇಶನ್ ಕರ್ನಾಟಕ ವತಿಯಿಂದ ಸಂಗೀತ ಸಾಮ್ರಾಟ, ಗಾನ ವಿಶಾರದ ಡಾ. ಪಂಡಿತ ಪುಟ್ಟರಾಜ ಕವಿಗವಾಯಿಗಳ 110ನೇ ಜಯಂತ್ಯೋತದ ಅಂಗವಾಗಿ ನಡೆದ ಸಂಗೀತ ಸೌರಭ ಕಾರ್ಯಕ್ರಮ ಒಟ್ಟು 42 ಮಂದಿ ಸಾಧಕರಿಗೆ ಪ್ರಶಸ್ತಿ ನೀಡಲಾಯಿತು.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಯುವ ಗಾಯಕರಾದ ಪ್ರಜ್ವಲ್ ಪುಟಾಣಿ ಅವರ ಸಾಧನೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಜ್ವಲ್,
ಪದ್ಮಭೂಷಣ ಪುಟ್ಟರಾಜ ಗವಾಯಿ ರಾಷ್ಟ್ರೀಯ ಪ್ರಶಸ್ತಿ ನನಗೆ ಕೊಟ್ಟು ಗೌರಿಸಿದವರಿಗೆ ಧನ್ಯವಾದಗಳು. ಪ್ರಶಸ್ತಿ ಕೊಡಲು ಮತ್ತು ನನಗೆ ಬೆಳೆಯಲು ಅನುಕೂಲ ಮಾಡಿಕೊಟ್ಟ ಬೆಳಗಾವಿಯ
ಸಮಾಜ ಸೇವಕರಾದ ಡಾ. ವಿಜಯ ಅಣ್ಣ ಜಂಬಗಿ ಹಾಗೂ
ಚೇತನ್ ಫೌಂಡೇಶನ್ ಕರ್ನಾಟಕದ ಅಧ್ಯಕ್ಷರಾದ
ಚಂದ್ರಶೇಖರ್ ಮಾಡಲಗೇರಿ ಅವರಿಗೆ ವಂದನೆಗಳು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು