2:22 PM Wednesday4 - February 2026
ಬ್ರೇಕಿಂಗ್ ನ್ಯೂಸ್
ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್… ಯಾವ ಹೈಸ್ಪೀಡ್ ರೈಲೂ ಬರಲ್ಲ: ಕೇಂದ್ರ ಬಜೆಟ್ ಕುರಿತು ಡಿಸಿಎಂ ಡಿ.ಕೆ. ಶಿವಕುಮಾರ್… ಏಪ್ರಿಲ್ 1ರಿಂದ ಹೊಸ ತೆರಿಗೆ ನೀತಿ ಜಾರಿ; ಶಿಕ್ಷಣ, ವೈದ್ಯಕೀಯ ಉದ್ದೇಶಗಳಿಗಾಗಿ ಟಿಸಿಎಸ್… ಕೇಂದ್ರ ಬಜೆಟ್ | 2047ರ ವಿಕಸಿತ ಭಾರತಕ್ಕೆ ಸುಧಾರಣಾ ಎಕ್ಸ್‌ಪ್ರೆಸ್ ಎಂದ ಪ್ರಧಾನಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ

18/12/2025, 18:49

ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು ₹ 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.
ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.
ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಚಿನ್ನಯ್ಯ ಪತ್ನಿ ಹಾಗೂ ವಕೀಲರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಸಾಕ್ಷಿದೂರುದಾರನನ್ನು ಆ. 23ರಂದು ವಿಶೇಷ ತನಿಖಾ ತಂಡದ ಪೊಲೀಸರು ಬಂಧಿಸಿದ್ದರು. ಸೆ.6ರಂದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು