7:13 PM Thursday18 - December 2025
ಬ್ರೇಕಿಂಗ್ ನ್ಯೂಸ್
ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ

18/12/2025, 18:49

ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು ₹ 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.
ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.
ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಚಿನ್ನಯ್ಯ ಪತ್ನಿ ಹಾಗೂ ವಕೀಲರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಸಾಕ್ಷಿದೂರುದಾರನನ್ನು ಆ. 23ರಂದು ವಿಶೇಷ ತನಿಖಾ ತಂಡದ ಪೊಲೀಸರು ಬಂಧಿಸಿದ್ದರು. ಸೆ.6ರಂದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು