3:20 PM Thursday13 - August 2026
ಬ್ರೇಕಿಂಗ್ ನ್ಯೂಸ್
ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ

18/12/2025, 18:49

ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು ₹ 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.
ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.
ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಚಿನ್ನಯ್ಯ ಪತ್ನಿ ಹಾಗೂ ವಕೀಲರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಸಾಕ್ಷಿದೂರುದಾರನನ್ನು ಆ. 23ರಂದು ವಿಶೇಷ ತನಿಖಾ ತಂಡದ ಪೊಲೀಸರು ಬಂಧಿಸಿದ್ದರು. ಸೆ.6ರಂದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು