6:13 AM Thursday7 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಬಿಡುಗಡೆ: ಶಿವಮೊಗ್ಗ ಜೈಲಿನಿಂದ ಬಂಧಮುಕ್ತಿ

18/12/2025, 18:49

ಶಿವಮೊಗ್ಗ(reporterkarnataka.com): ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಅವರನ್ನು ಶಿವಮೊಗ್ಗ ಜೈಲಿನಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು.
ಆತನಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ನ.24ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆಯಲು ₹ 1 ಲಕ್ಷ ಭದ್ರತಾ ಠೇವಣಿ ನೀಡಬೇಕು ಎಂದು ಷರತ್ತು ವಿಧಿಸಿತ್ತು. ಆದರೆ ಭದ್ರತಾ ಠೇವಣಿ ಮೊತ್ತ ಪಾವತಿಸಲು ವಿಳಂಬವಾದ ಹಿನ್ನೆಲೆಯಲ್ಲಿ ಬಿಡುಗಡೆ ಆಗಿರಲಿಲ್ಲ. ಮಂಗಳೂರಿನಿಂದ ಬುಧವಾರ ರಾತ್ರಿ ಶಿವಮೊಗ್ಗಕ್ಕೆ ಬಂದಿದ್ದ ಚಿನ್ನಯ್ಯನ ಪತ್ನಿ ಮಲ್ಲಿಕಾ ಹಾಗೂ ಸಹೋದರಿ ಮತ್ತು ಚಿನ್ನಯ್ಯನ ಪರ ವಕೀಲರು ಇಲ್ಲಿನ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ ಡಾ.ರಂಗನಾಥ್ ಅವರಿಗೆ ಜಾಮೀನು ಪ್ರಕ್ರಿಯೆಯ ದಾಖಲೆಗಳನ್ನು ಸಲ್ಲಿಸಿದ್ದರು. ಹೀಗಾಗಿ ಬೆಳಿಗ್ಗೆ 8.30ಕ್ಕೆ ಬಿಡುಗಡೆ ಮಾಡಲಾಯಿತು.
ಚಿನ್ನಯ್ಯನ ಬಿಡುಗಡೆ ಹಿನ್ನೆಲೆಯಲ್ಲಿ ಇಲ್ಲಿನ ಸೋಗಾನೆಯ ಕೇಂದ್ರ ಕಾರಾಗೃಹದ ಬಳಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಜೈಲಿನ ಆವರಣಕ್ಕೆ ತೆರಳಲು ಮಾಧ್ಯಮದವರಿಗೆ ನಿರ್ಬಂಧ ವಿಧಿಸಲಾಗಿತ್ತು.
ಜೈಲಿನಿಂದ ಬಿಡುಗಡೆ ಆಗುತ್ತಿದ್ದಂತೆಯೇ ಚಿನ್ನಯ್ಯ ಪತ್ನಿ ಹಾಗೂ ವಕೀಲರೊಂದಿಗೆ ಶಿವಮೊಗ್ಗದಿಂದ ಮಂಗಳೂರಿಗೆ ತೆರಳಿದರು ಎಂದು ತಿಳಿದುಬಂದಿದೆ.
ಈ ಪ್ರಕರಣದಲ್ಲಿ ಸಾಕ್ಷಿದೂರುದಾರನನ್ನು ಆ. 23ರಂದು ವಿಶೇಷ ತನಿಖಾ ತಂಡದ ಪೊಲೀಸರು ಬಂಧಿಸಿದ್ದರು. ಸೆ.6ರಂದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು