2:40 PM Saturday2 - August 2025
ಬ್ರೇಕಿಂಗ್ ನ್ಯೂಸ್
ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಮತಗಳ್ಳತನ ಬಗ್ಗೆ ರಾಹುಲ್ ಗಾಂಧಿಯವರ ಬಳಿ ಸಾಕ್ಷಿ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತಗಳ್ಳತನದ ವಿರುದ್ಧ ರಾಹುಲ್ ನೇತೃತ್ವದಲ್ಲಿ ಆ.5ರಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ: ಡಿಸಿಎಂ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ ಶಿರೂರು ಗುಡ್ಡ ಕುಸಿತ ದುರಂತ ಕಥನ ಬೆಳ್ಳಿತೆರೆ ಮೇಲೆ ನೋಡಿ: ಮಲಯಾಳಂನಲ್ಲಿ ಸಿನಿಮಾ… ಮೈಸೂರಿನಲ್ಲಿ ನಿಷೇಧಿತ ಎಂಡಿಎಂಎ ಡ್ರಗ್ಸ್ ತಯಾರಿಕಾ ಘಟಕ ಪತ್ತೆ: ಸಂಸತ್ ನಲ್ಲಿ ಯದುವೀರ್… 3 ವರ್ಷ ಬಳಿಕ ಯಾವ ಪಕ್ಷದಿಂದ ಸ್ಪರ್ಧಿಸುತ್ತೇನೋ ಗೊತ್ತಿಲ್ಲ: ಶಾಸಕಿ ನಯನಾ ಮೋಟಮ್ಮ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಏನಿಲ್ಲ ಏನಿಲ್ಲ ಎನ್ನುವುದರ ನಡುವೆ ಸಿಕ್ಕೇ ಬಿಡ್ತು…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಕೇಸ್ ವಾಪಸ್ ಪಡೆಯುವಂತೆ ಪೊಲೀಸ್ ಇನ್ಸ್ ಪೆಕ್ಟರ್ ನಿಂದ ದೂರುದಾರನಿಗೆ ಬೆದರಿಕೆ?

02/08/2025, 14:36

ಧರ್ಮಸ್ಥಳ(reporterkarnataka.com):ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಎಸ್ಐಟಿ ತನಿಖೆ ವೇಗದಲ್ಲಿ ನಡೆಯುತ್ತಿದ್ದಂತೆ ಎಸ್ಐಟಿಯಲ್ಲಿರುವ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ದೂರುದಾರನಿಗೆ ಕೇಸ್ ವಾಪಸ್ ಪಡೆಯುವಂತೆ ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪೊಲೀಸ್ ಇನ್ಸ್‍ಪೆಕ್ಟರ್ ಮಂಜುನಾಥ ಗೌಡ ಎಂಬವರು ದೂರುದಾರನಿಗೆ ದೂರು ವಾಪಸ್ ಪಡೆಯಬೇಕು. ಇಲ್ಲದಿದ್ದರೆ, ನಿನಗೇ ಶಿಕ್ಷೆಯಾಗುತ್ತದೆ ಎಂದು ಬೆದರಿಸಿದ್ದಾರೆ ಎಂದು ತಿಳಿದು ಬಂದಿದೆ.
“ನಿನ್ನ ದೂರಿನಿಂದ ನಿನಗೇ ಶಿಕ್ಷೆಯಾಗುತ್ತೆ, ಜೀವಮಾನವಿಡೀ ಜೈಲಿನಲ್ಲಿರಬೇಕಾಗುತ್ತೆ. ಪೊಲೀಸರು ನಿನ್ನನ್ನೇ ಅರೆಸ್ಟ್ ಮಾಡ್ತಾರೆ.” ಇತ್ಯಾದಿ ಹೆದರಿಸಿ, ದೂರು ವಾಪಸ್ ಪಡೆಯುವಂತೆ ಇನ್ಸ್ ಪೆಕ್ಟರ್
ಸೂಚಿಸಿದ್ದಾರೆ ಎನ್ನಲಾಗಿದೆ.
ತನಗೆ ದೂರು ಕೊಡುವಂತೆ ಹೊರಗಿನವರು ಪ್ರಚೋದನೆ ಮಾಡಿದರು ಎಂದು ಹೇಳಿಕೆ ಕೊಡುವಂತೆ ಮಾಡಿ ಅದನ್ನೆಲ್ಲಾ ತನ್ನ ಮೊಬೈಲ್ ನಲ್ಲಿ ಇನ್ಸ್ ಪೆಕ್ಟರ್ ಚಿತ್ರೀಕರಿಸಿಕೊಂಡಿದ್ದಾರೆ.
ಸದ್ಯ ಆ ಇನ್ಸಪೆಕ್ಟರ್ ರಜೆಯ ಮೇಲೆ ತೆರಳಿದ್ದಾರೆ ಎನ್ನಲಾಗಿದೆ.
ಈ ಇನ್ಸ್ ಪೆಕ್ಟರ್ ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದುದಾಗಿ ತಿಳಿದು ಬಂದಿದೆ.
ಈ ಆಘಾತಕಾರಿ ಘಟನೆ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ
ಎನ್ನಲಾಗಿದೆ. ಎಸ್ಐಟಿ ಕಡೆಯಿಂದ ಈ ಕುರಿತು ಸ್ಪಷ್ಟೀಕರಣ ಇನ್ನಷ್ಟೇ ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು