4:54 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಕೇಸ್ ವಾಪಸ್ ಪಡೆಯುವಂತೆ ಪೊಲೀಸ್ ಇನ್ಸ್ ಪೆಕ್ಟರ್ ನಿಂದ ದೂರುದಾರನಿಗೆ ಬೆದರಿಕೆ?

02/08/2025, 14:36

ಧರ್ಮಸ್ಥಳ(reporterkarnataka.com):ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಎಸ್ಐಟಿ ತನಿಖೆ ವೇಗದಲ್ಲಿ ನಡೆಯುತ್ತಿದ್ದಂತೆ ಎಸ್ಐಟಿಯಲ್ಲಿರುವ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ದೂರುದಾರನಿಗೆ ಕೇಸ್ ವಾಪಸ್ ಪಡೆಯುವಂತೆ ಬೆದರಿಕೆಯೊಡ್ಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಪೊಲೀಸ್ ಇನ್ಸ್‍ಪೆಕ್ಟರ್ ಮಂಜುನಾಥ ಗೌಡ ಎಂಬವರು ದೂರುದಾರನಿಗೆ ದೂರು ವಾಪಸ್ ಪಡೆಯಬೇಕು. ಇಲ್ಲದಿದ್ದರೆ, ನಿನಗೇ ಶಿಕ್ಷೆಯಾಗುತ್ತದೆ ಎಂದು ಬೆದರಿಸಿದ್ದಾರೆ ಎಂದು ತಿಳಿದು ಬಂದಿದೆ.
“ನಿನ್ನ ದೂರಿನಿಂದ ನಿನಗೇ ಶಿಕ್ಷೆಯಾಗುತ್ತೆ, ಜೀವಮಾನವಿಡೀ ಜೈಲಿನಲ್ಲಿರಬೇಕಾಗುತ್ತೆ. ಪೊಲೀಸರು ನಿನ್ನನ್ನೇ ಅರೆಸ್ಟ್ ಮಾಡ್ತಾರೆ.” ಇತ್ಯಾದಿ ಹೆದರಿಸಿ, ದೂರು ವಾಪಸ್ ಪಡೆಯುವಂತೆ ಇನ್ಸ್ ಪೆಕ್ಟರ್
ಸೂಚಿಸಿದ್ದಾರೆ ಎನ್ನಲಾಗಿದೆ.
ತನಗೆ ದೂರು ಕೊಡುವಂತೆ ಹೊರಗಿನವರು ಪ್ರಚೋದನೆ ಮಾಡಿದರು ಎಂದು ಹೇಳಿಕೆ ಕೊಡುವಂತೆ ಮಾಡಿ ಅದನ್ನೆಲ್ಲಾ ತನ್ನ ಮೊಬೈಲ್ ನಲ್ಲಿ ಇನ್ಸ್ ಪೆಕ್ಟರ್ ಚಿತ್ರೀಕರಿಸಿಕೊಂಡಿದ್ದಾರೆ.
ಸದ್ಯ ಆ ಇನ್ಸಪೆಕ್ಟರ್ ರಜೆಯ ಮೇಲೆ ತೆರಳಿದ್ದಾರೆ ಎನ್ನಲಾಗಿದೆ.
ಈ ಇನ್ಸ್ ಪೆಕ್ಟರ್ ಶಿರಸಿ ಗ್ರಾಮಾಂತರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದುದಾಗಿ ತಿಳಿದು ಬಂದಿದೆ.
ಈ ಆಘಾತಕಾರಿ ಘಟನೆ ಬಗ್ಗೆ ದೂರುದಾರನ ಪರ ವಕೀಲರು ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ
ಎನ್ನಲಾಗಿದೆ. ಎಸ್ಐಟಿ ಕಡೆಯಿಂದ ಈ ಕುರಿತು ಸ್ಪಷ್ಟೀಕರಣ ಇನ್ನಷ್ಟೇ ಬರಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು