12:46 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

Chikkamagaluru | ಬಣಕಲ್: ಯುವಕನ ಜತೆ 22ರ ಹರೆಯದ ಗೃಹಿಣಿ ಪರಾರಿ: ಹೆದ್ದಾರಿ ತಡೆದು ಪ್ರತಿಭಟನೆ

14/08/2025, 21:34

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnata@gmail.com

ವಿವಾಹಿತ ಮಹಿಳೆಯೊಬ್ಬರು ಮುಸ್ಲಿಂ ಯುವಕನ ಜೊತೆ ಪರಾರಿ ಆರೋಪ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆ ಎದುರು ಜಮಾಯಿಸಿ, ರಸ್ತೆ ತಡೆ ನಡೆಸಿದರು.


2 ವರ್ಷದಿಂದ ಮದುವೆಯಾಗಿದ್ದ 22 ವರ್ಷದ ಪೂಜಾ ಎಂಬ ಗೃಹಿಣಿ ಮುಸ್ಲಿಂ ಯುವಕ ಆಶಿಕ್ ಎಂಬಾತನ ಜತೆ ಪರಾರಿಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನೆಲೆಸಿದೆ.
ನಾಪತ್ತೆಯಾದ ಮಹಿಳೆಯ ಪತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ದೂರಿನನ್ವಯ ಕಾರ್ಯಾಚರಣೆ ನಡೆಸಿದ ಪೊಲೀಸರು ಮಹಿಳೆಯನ್ನ ಪತ್ತೆ ಮಾಡಿದ್ದಾರೆ.

ಹಿಂದೂ ಸಂಘಟನೆ ಮುಖಂಡರು ಹಾಗೂ ಗ್ರಾಮಸ್ಥರು
ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದರು. ಪೊಲೀಸ್ ಠಾಣೆಯ ಗೇಟ್ ಹಾಕಿದ್ದಕ್ಕೆ ಹಿಂದೂ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದವು.
ಏಕಾಏಕಿ ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿದ ಹಿಂದೂ ಮುಖಂಡರು ಪ್ರತಿಭಟನೆ ನಡೆಸಿದರು. ರಸ್ತೆ ತಡೆ ನಡೆಸಿದ ಸಂಘಟಕರು- ಗ್ರಾಮಸ್ಥರ ಮನವೋಲಿಸಲು ಪೊಲೀಸರ ಹರಸಾಹಸ ನಡೆಸಬೇಕಾಯಿತು. ನಂತರ ಠಾಣೆ ಮುಂಭಾಗಕ್ಕೆ ಬಿಡುವ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆಯಲಾಯಿತುಮ
ಮುಸ್ಲಿಂ ಯುವಕನ ವಿರುದ್ಧ ಕುಟುಂಬಸ್ಥರು ಹಾಗೂ ಹಿಂದೂ ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಣಕಲ್ ಪೊಲೀಸ್ ಠಾಣೆಯ ಮುಂದೆ ಭಾರಿ ಪ್ರತಿಭಟನೆ ನಡೆಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು