10:05 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ; ಎಸ್ಐಟಿ ರಚಿಸಿ, ಅಗೆದು ಗುಡ್ಡೆ ಹಾಕಿದ್ದೊಂದೇ ಬಂತು: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಿಡಿ

13/08/2025, 18:56

* ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂದು ಈಗ ಉಲ್ಟಾ

* ಏನೂ ಸಿಗದಿದ್ದಕ್ಕೆ ʼಸರ್ಕಾರದ ಪಾತ್ರವಿಲ್ಲʼ ಎನ್ನುತ್ತಿರೋ ಸಿಎಂ

ನವದೆಹಲಿ(reporterkarnataka.com): ಧರ್ಮಸ್ಥಳ ವಿಚಾರದಲ್ಲಿ ಸೂಕ್ಷ್ಮವಾಗಿ ವರ್ತಿಸಬೇಕಿದ್ದ ರಾಜ್ಯ ಸರ್ಕಾರ ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಏನೊಂದೂ ಸಿಗದಿದ್ದಕ್ಕೆ ಮುಖ್ಯಮಂತ್ರಿ ಈಗ ವರಸೆ ಬದಲಿಸುತ್ತಿದ್ದಾರೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಲ್‌ಪಿ ಸಭೆಯಲ್ಲಿ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎಂದಿರುವ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಕೇಂದ್ರ ಸಚಿವರು, SIT ರಚಿಸಿದ್ದು ತಾವೇ ಅಲ್ಲವೇ? ಎಂದು ತಿರುಗೇಟು ಕೊಟ್ಟಿದ್ದಾರೆ.
SIT ರಚಿಸಿ ತನಿಖೆಗೆ ಆದೇಶಿಸಿದ ಸಿಎಂ ಈಗ ಸರ್ಕಾರದ ಪಾತ್ರವಿಲ್ಲವೆಂದು ಉಲ್ಟಾ ಹೊಡೆಯುತ್ತಿದ್ದಾರೆ. ಪರ-ವಿರೋಧ ಚರ್ಚೆಯ ನಡುವೆಯೇ ತರಾತುರಿಯಲ್ಲಿ SIT ರಚಿಸಿ ಉತ್ಖನನಕ್ಕೆ ಆದೇಶ ನೀಡಿದ್ದು ತಾವೇ ಅಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

*ಮಣ್ಣು ಅಗೆದಿದ್ದೊಂದೇ ಬಂತು!:* ಧರ್ಮಸ್ಥಳದ 13 ಸ್ಪಾಟ್ ಉತ್ಖನನ ಮಾಡಿದ ಜಾಗಗಳಲ್ಲಿ ಈವರೆಗೂ ಮಣ್ಣು ಅಗೆದಿದ್ದೊಂದೇ ಬಂತು. ಅನಾಮಿಕ ಆರೋಪಿಸಿದಂತೆ ಏನೊಂದೂ ಗುರುತರ ಸಾಕ್ಷಿ, ಶವಗಳ ಅವಶೇಷ ಸಿಗದಾಯಿತು. ಹೀಗಾಗಿ ಸಿಎಂ ಈಗ ತಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆಂಬ ಕಾರಣಕ್ಕೆ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿದ್ದಾರೆಂದು ಸಚಿವ ಜೋಶಿ ಟೀಕಿಸಿದ್ದಾರೆ.

*ಸಿಎಂ ಪಾತ್ರವಿಲ್ಲದೆ SIT ರಚನೆ ಆಯಿತಾ?:* ಧರ್ಮಸ್ಥಳ ಪ್ರಕರಣದಲ್ಲಿ ಸಿಎಂ ಪಾತ್ರವಿಲ್ಲದೆ SIT ರಚಿಸಲಾಯಿತೆ? ಎಂದು ಪ್ರಶ್ನಿಸಿದ ಜೋಶಿ, ಇಷ್ಟೆಲ್ಲಾ ಹೈಡ್ರಾಮಾ ಮಾಡುವ ಬದಲು ಸರಿಯಾಗಿ ಪೊಲೀಸ್ ತನಿಖೆ ನಡೆಸಬಹುದಿತ್ತು. ಆದರೆ ಅದೇನೋ ಅಗೆದು ಗುಡ್ಡೆ ಹಾಕುವ ಕೆಲಸ ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಹರಿ ಹಾಯ್ದಿದ್ದಾರೆ.
ಧರ್ಮಸ್ಥಳಕ್ಕೆ ತಲೆಮಾರಿನ ಇತಿಹಾಸವಿದೆ. ಈ ಪವಿತ್ರ ಕ್ಷೇತ್ರಕ್ಕೆ ಪ್ರತಿ ‌ದಿನ ಲಕ್ಷಾಂತರ ಜನರು ಭೇಟಿ‌ ನೀಡುತ್ತಾರೆ. ಆದರೆ ರಾಜ್ಯ ಸರ್ಕಾರ ಜನರ ನಂಬಿಕೆ ವಿಚಾರದಲ್ಲಿ ಆಟವಾಡುತ್ತಿದೆ. ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಳ್ಳುತ್ತಿದ್ದು, ತೀವ್ರ ಖಂಡನೀಯ ಎಂದಿದ್ದಾರೆ ಜೋಶಿ.
ದಟ್ಟಾರಣ್ಯ ಪ್ರದೇಶದ ನೇತ್ರಾವತಿ ಸ್ನಾನಘಟ್ಟದ 13 ಭಾಗಗಳಲ್ಲಿ ಶವಗಳನ್ನು ಹೂತು ಹಾಕಿದೆ ಎಂದಿರುವ ಅನಾಮಿಕನ ಆರೋಪದ ಬಗ್ಗೆ ಪರ-ವಿರೋಧ ಚರ್ಚೆ ನಡುವೆಯೇ SIT ರಚಿಸಿ, ಈಗ ಉತ್ಖನನ ಜಾಗದಲ್ಲಿ ಏನೂ ಸಿಗದಿದ್ದರಿಂದ ʼಧರ್ಮಸ್ಥಳ ತನಿಖೆಯಲ್ಲಿ ಸರ್ಕಾರದ ಪಾತ್ರವಿಲ್ಲ’ ಎನ್ನುತ್ತಿರುವುದು ನಿಜಕ್ಕೂ ದುರಂತ ಹಾಗೂ ಖಂಡನೀಯ ಎಂದು ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು