8:13 AM Sunday30 - November 2025
ಬ್ರೇಕಿಂಗ್ ನ್ಯೂಸ್
ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ… ಶಾಲೆಯಂಗಳದಲ್ಲಿ ತಾರಾಲಯ: ಗ್ರಾಮೀಣ ಮಕ್ಕಳಲ್ಲಿ ಖಗೋಳ ವಿಜ್ಞಾನ ಕೌತುಕ ಬಿತ್ತುವ ಗುರಿ; ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರಗಳ ಪತ್ತೆಗೆ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್ ತಂತ್ರಜ್ಞಾನ ಬಳಕೆಗೆ ಎಸ್ಐಟಿ ಸಿದ್ದತೆ

07/08/2025, 14:00

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂತಿಟ್ಟ ಶವಗಳ ಅಸ್ತಿಪಂಜರಗಳ ಪತ್ತೆಗಾಗಿ ಗ್ರೌಂಡ್ ಪೆನಟ್ರೇಟಿಂಗ್ ರೇಡಾರ್(ಜಿಪಿಆರ್) ತಂತ್ರಜ್ಞಾನ ಬಳಸುವ ಕುರಿತು ವಿಶೇಷ ತನಿಖಾ ತಂಡ(ಎಸ್ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಸ್ಐಟಿ ಈಗಾಗಲೇ 12 ಸ್ಪಾಟ್ ಗಳ ಉತ್ಖನನ ಕಾರ್ಯ ಪೂರ್ಣಗೊಳಿಸಿದೆ. ಬಂಗ್ಲಗುಡ್ಡೆಯಲ್ಲಿ ಅಸ್ತಿಪಂಜರ ದೊರೆತ ಬಳಿಕ 13ನೇ ಸ್ಪಾಟ್ ಉತ್ಖನನಕ್ಕೆ ಜಿಪಿಆರ್ ತಂತ್ರಜ್ಞಾನ ಬಳಕೆಗೆ ಸಿದ್ದತೆ ನಡೆಸಿದೆ.
ಸ್ಪಾಟ್ ನಂಬರ್ 13ರಲ್ಲಿ ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ಸಂಪರ್ಕದ ವಯರ್ ಗಳು ಹಾದು ಹೋಗಿರುವುದರಿಂದ ಇಲ್ಲಿ ಮಾನವ ಶ್ರಮದ ಮೂಲಕ ಅಥವಾ ಹಿಟಾಚಿ ಬಳಕೆ ಸ್ವಲ್ಪ ಕಷ್ಟಕರವೆನಿಸಿದೆ. ಅದಲ್ಲದೆ ಬಂಗ್ಲಗುಡ್ಡೆಯಲ್ಲಿ ಇನ್ನಷ್ಟು ಶೋಧಕ್ಕೆ ಆಧುವಿಕ ತಂತ್ರಜ್ಞಾನದ ಬಳಕೆಗೆ ಎಸ್ಐಟಿ ಮುಂದಾಗಿ ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು