6:11 PM Wednesday15 - July 2026
ಬ್ರೇಕಿಂಗ್ ನ್ಯೂಸ್
ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ ಐಟಿಯಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

15/07/2026, 18:08

ಮಂಗಳೂರು(reporterkarnataka.com): ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ.
ಬೆಳ್ತಂಗಡಿ ಎಸ್‌ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಜಯಂತ್ ಟಿ., ವಿಠಲ್ ಗೌಡ ಹಾಗೂ ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ ವರದಿಯನ್ನು ಸಲ್ಲಿಕೆ ಮಾಡಿದ್ದರು. ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು ಅಪರಾಹ್ನ 3 ಗಂಟೆಗೆ ಎಸ್‌ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7,005 ಪುಟಗಳ ಅಂತಿಮ ವರದಿಯನ್ನು 12 ಫೈಲ್ ಗಳನ್ನು ಮಾಡಿ ಸಲ್ಲಿಸಿದ್ದಾರೆ. ಎಸ್‌ಐಟಿ ಎಸ್ಪಿ ಸಿ.ಎ.ಸೈಮನ್, ಇನ್ ಸ್ಪೆಕ್ಟರ್ ಕುಸುಮಾಧರ್,ಇನ್ ಸ್ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು.
ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯಕ್ಕೆ ಹಾಜರಾಗಿದ್ದಾನೆ.

ಇತ್ತೀಚಿನ ಸುದ್ದಿ

ಜಾಹೀರಾತು