9:31 PM Tuesday4 - November 2025
ಬ್ರೇಕಿಂಗ್ ನ್ಯೂಸ್
ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಎಸ್ಐಟಿ ತಂಡದಿಂದ ಸೌಜನ್ಯ ಪರ ಹೋರಾಟಗಾರ ತಿಮರೋಡಿ ಮನೆಗೆ ಎಂಟ್ರಿ; ಸ್ಥಳ ಮಹಜರು

26/08/2025, 13:49

ಉಜಿರೆ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ಎಸ್ಐಟಿ ಇಂದು ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಡಿ
ತಿಮರೋಡಿ ಅವರ ಉಜಿರೆ ಸಮೀಪದ ಮನೆಗೆ ಎಂಟ್ರಿ ಕೊಟ್ಟಿದೆ.
ಸರ್ಚ್ ವಾರಂಟ್ ಮೂಲಕ ಎಸ್ಐಟಿ ಹಿರಿಯ ಅಧಿಕಾರಿಗಳು ತಿಮರೋಡಿ ಮನೆಗೆ ಪ್ರವೇಶ ಮಾಡಿದ್ದಾರೆ. ಸಾಕ್ಷಿದಾರ, ದೂರುದಾರ ಹಾಗೂ ಆರೋಪಿ ಆಗಿರುವ ಚಿನ್ನಯ್ಯನನ್ನು ಎಸ್ಐಟಿ ತಂಡ ಸ್ಥಳ ಮಹಜರು ನಡೆಸಲು ತಿಮರೋಡಿ ಮನೆಗೆ ಕರೆದು ತಂದಿದೆ.
ದೂರುದಾರ ತಾನು ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ನಿವಾಸದಲ್ಲಿ ಆಶ್ರಯ ಪಡೆದಿದ್ದೆ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳ ತಂಡವು ಇಂದು ಬೆಳಗ್ಗೆ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ತಿಮರೋಡಿ ಮತ್ತು ಅವರ ಸಹೋದರ ಮೋಹನ್ ಶೆಟ್ಟಿ ಅವರ ಮನೆಗೆ ಬಂದಿದ್ದಾರೆ.
ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರೆಂಟ್ ಪಡೆದುಕೊಂಡಿರುವ ಎಸ್‌ಐಟಿ ಅಧಿಕಾರಿಗಳು ಸಾಕ್ಷಿ ದೂರುದಾರನನ್ನು ಜೊತೆಯಲ್ಲಿ ಕರೆದುಕೊಂಡು ತಿಮರೋಡಿ ಮನೆಗೆ ಬಂದಿದ್ದು, ಮಹಜರು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು