5:00 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಪ್ರಕರಣ: ಅಸ್ತಿಪಂಜರ ಶೋಧಕ್ಕೆ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ ಬಳಕೆಗೆ ಸುಜಾತಾ ಭಟ್ ಪರ ವಕೀಲರ ಆಗ್ರಹ

03/08/2025, 21:04

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನಡೆಯುತ್ತಿರುವ ಅಸ್ತಿಪಂಜರ ಶೋಧ ಕಾರ್ಯಾಚರಣೆಯಲ್ಲಿ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ಗಳನ್ನು (ಜಿಪಿಆರ್) ಬಳಸುವಂತೆ ಅನನ್ಯಾ ಭಟ್ ತಾಯಿ ಸುಜಾತಾ ಭಟ್ ಅವರ ವಕೀಲರಾದ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.
ಧರ್ಮಸ್ಥಳದಲ್ಲಿ ಕಾಣೆಯಾಗಿದ್ದಾರೆ ಎನ್ನಲಾದ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯಾ ಭಟ್ ಅವರ ತಾಯಿ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಎನ್. ಅವರು ಸಾಕ್ಷಿ ದೂರುದಾರ ಈಗಾಗಲೇ ತೋರಿಸಿ ಅಗೆಸಿರುವ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಭಾರತದಲ್ಲಿ ಬಳಕೆಯಲ್ಲಿರುವ ಅತ್ಯಾಧುನಿಕ ಜಿಪಿಆರ್ ಬಳಸಿ ಕಳೇಬರಗಳ ಪತ್ತೆ ಕಾರ್ಯಾಚರಣೆ ನಡೆಸುವಂತೆ ಎಸ್‌ಐಟಿ ತಂಡಕ್ಕೆ ಮನವಿ ಮಾಡಿದ್ದಾರೆ.
ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿರುವ 10 ಸ್ಥಳಗಳಲ್ಲಿ ಅಗೆದಾಗ ಕೆಲವು ಸ್ಥಳಗಳಲ್ಲಿ ಕಳೇಬರಗಳು ಪತ್ತೆಯಾಗಿವೆ ಎಂಬುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ಸಾಕ್ಷಿಯೇ ಹೇಳಿರುವಂತೆ, ಆತ ಧರ್ಮಸ್ಥಳವನ್ನು 2014ರಲ್ಲಿಯೇ ತೊರೆದಿದ್ದಾನೆ. ಅಪಾರ ಮಳೆಯನ್ನು ಕಾಣುವ ಧರ್ಮಸ್ಥಳ ಪ್ರದೇಶದಲ್ಲಿ ಮಣ್ಣು ಒಂದೆಡೆಯಿಂದ ಮತ್ತೊಂದೆಡೆಗೆ ಹರಿದು ಶೇಖರಣೆಯಾಗುವ ಸಾಧ್ಯತೆ ಹೆಚ್ಚಾಗಿದೆ. ಸುಮಾರು 11 ವರ್ಷಗಳಲ್ಲಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಈ ಕಾರಣಕ್ಕೆ ಸಾಕ್ಷಿದಾರ ತನ್ನ ನೆನಪಿನಲ್ಲಿ ಇಟ್ಟುಕೊಂಡ ಗುರುತುಗಳಲ್ಲಿ ಬದಲಾವಣೆಯಾಗಿರುವ ಸಾಧ್ಯತೆಯೂ ಅಧಿಕವಾಗಿದೆ. ಆದ್ದರಿಂದ, ನಾವು ಈಗಾಗಲೇ (ಜುಲೈ 29ರಂದು) ಮನವಿ ಮಾಡಿಕೊಂಡಂತೆ, ಸದ್ಯ ಅಗೆಯಲಾಗಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಅತ್ಯಾಧುನಿಕ ಗ್ರೌಂಡ್ ಪೆನೇಟ್ರೇಟಿಂಗ್ ರೇಡಾರ್‌ಗಳನ್ನು (ಜಿಪಿಆರ್) ಬಳಸುವಂತೆ ಕೇಳಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.
ಹುಲ್ಲುಕಡ್ಡಿಯನ್ನು ತೆರವುಗೊಳಿಸಲು ಉಪಯೋಗಿಸುವ ಯಂತ್ರದಷ್ಟು ಗಾತ್ರವಿರುವ ಈ ಜಿಪಿಆರ್‌ಗಳನ್ನು ಕೆಲವೇ ವ್ಯಕ್ತಿಗಳನ್ನು ನಿಯೋಜಿಸಿ ಬಳಸಬಹುದು. ಆದ್ದರಿಂದ ದೂರುದಾರ ಗುರುತಿಸಿರುವ ಜಾಗಗಳ ಪೈಕಿ ಈಗಾಗಲೇ ಅಗೆದಿರುವ ಸ್ಥಳಗಳಲ್ಲಿ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಕಳೇಬರಗಳ ಪತ್ತೆಗೆ ಜಿಪಿಆರ್ ಬಳಸಬೇಕು ಎಂದು ವಕೀಲ ಮಂಜುನಾಥ್ ಎನ್. ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು