12:53 AM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋ; ತನಿಖೆ ಎನ್ ಐಎ ವಹಿಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಗ್ರಹ

25/08/2025, 17:07

ಬೆಂಗಳೂರು(reporterkarnarnataka.com): ಧರ್ಮಸ್ಥಳ ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 1ರಂದು ಧರ್ಮಸ್ಥಳ ಚಲೋಗೆ ಕರೆ ಕೊಡುತ್ತಿದ್ದೇವೆ. ಎಲ್ಲಾ ಜಿಲ್ಲೆಗಳಿಂದ ನಮ್ಮ ಪಕ್ಷದ ಮುಖಂಡರು ಕಾರ್ಯಕರ್ತರು ಭಾಗವಹಿಸುತ್ತಾರೆ.ರಾಜ್ಯದ ಎಲ್ಲ ಹಿಂದೂಪರ ಸಂಘಟನೆಗಳು ಭಾಗವಹಿಸುತ್ತಾರೆ. ಈ ಧರ್ಮಯುದ್ಧ ಜಾತ್ಯತೀತ ವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು ಎಂದು ವಿಜಯೇಂದ್ರ ಹೇಳಿದರು.
ಈ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುವದಿಲ್ಲ.
ಧರ್ಮಸ್ಥಳ ವಿಚಾರದಲ್ಲಿ ಯಾವುದೇ ಹುಡುಗಾಟಿಕೆ ಮಾಡಬಾರದು ಎಂದು ಸುಮ್ಮನೆ ಇದ್ದೆವು. ಆದ್ರೆ ಈಗ ಸುಮ್ಮನೆ ಕೂಡಲು ಆಗುವದಿಲ್ಲ. ನಾನು ಮಂಜುನಾಥ ಸ್ವಾಮಿ ಅವರ ಬಳಿ ಪ್ರಾರ್ಥನೆ ಮಾಡುತ್ತೇನೆ ಎಂದರು.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಕೆ. ಗೋಪಾಲಯ್ಯ, ಶಾಸಕ ವಿಶ್ವನಾಥ, ಮಾಜಿ ಶಾಸಕರಾದ ಪ್ರೀತಂಗೌಡ, ನಾರಾಯಣಸ್ವಾಮಿ, ಮುಖಂಡ ತಮ್ಮೇಶ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು