10:26 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಧರ್ಮಸ್ಥಳ : ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಬಂದೂಕು, ಎರಡು ತಲವಾರು ವಶ

17/09/2025, 22:25

ಮಂಗಳೂರು(Reporterkarnataka.com):ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಕ್ರ:39/2025 (ಬಿಎನ್ಎಸ್ 2023) ಪ್ರಕಾರ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡ (SIT)ವು ಆಗಸ್ಟ್ 26, 2025ರಂದು ಉಜಿರೆ ಗ್ರಾಮದ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಯಲ್ಲಿ ಶೋಧ ನಡೆಸಿತು.
ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು, ಪಂಚರು, ಸಿಬ್ಬಂದಿ, ಸೋಕೋ ಅಧಿಕಾರಿಗಳು ಹಾಗೂ ಎಸ್ಐಟಿ ತಂಡದ ಸದಸ್ಯರ ಸಮ್ಮುಖದಲ್ಲಿ ಶೋಧ ಕಾರ್ಯಾಚರಣೆ ನಡೆಯಿತು. ಈ ವೇಳೆ ಮನೆಯಿಂದ ಒಂದು ಬಂದೂಕು ಮತ್ತು ಎರಡು ತಲವಾರುಗಳು ಪತ್ತೆಯಾದವು. ಪತ್ತೆಯಾದ ವಸ್ತುಗಳನ್ನು ವಶಪಡಿಸಿಕೊಂಡು, ಸಂಬಂಧಿತ ದಾಖಲೆಗಳೊಂದಿಗೆ ಮುಂದಿನ ಕಾನೂನು ಕ್ರಮಕ್ಕೆ ಮಾನ್ಯ ನ್ಯಾಯಾಲಯಕ್ಕೆ ನಿವೇದಿಸಲಾಯಿತು.

ಈ ಕುರಿತು ಎಸ್ಐಟಿ ಅಧಿಕಾರಿಗಳು ಪೊಲೀಸ್ ಅಧೀಕ್ಷಕರಿಗೆ ಅಧಿಕೃತ ದೂರು ಸಲ್ಲಿಸಿದ್ದು, ಅದರ ಆಧಾರದ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 16, 2025ರಂದು ಹೊಸ ಪ್ರಕರಣ ದಾಖಲಿಸಲಾಯಿತು. ಅಕ್ರ:108/2025 ಪ್ರಕಾರ Arms Act 1959ರ ಕಲಂ 25(1)(1-A) ಮತ್ತು 25(1)(1-B)(a) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರಿದಿದೆ.

ಪ್ರಕರಣದ ಗಂಭೀರತೆಯನ್ನು ಗಮನಿಸಿ ಶಸ್ತ್ರಾಸ್ತ್ರಗಳು ಯಾವ ಮೂಲದಿಂದ ಬಂದವು, ಯಾರ ಬಳಕೆಗೆ ಇಟ್ಟಿದ್ದರು, ಮತ್ತೇನಾದರೂ ಅಕ್ರಮ ಚಟುವಟಿಕೆಗಳಿಗೆ ಸಂಬಂಧವಿದೆಯೇ ಎಂಬುದರ ಬಗ್ಗೆ ಪೊಲೀಸರು ಆಳವಾದ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು