5:49 PM Wednesday18 - March 2026
ಬ್ರೇಕಿಂಗ್ ನ್ಯೂಸ್
Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು