12:33 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು