7:40 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸಾಧಾರಣ ಭಕ್ತರ ದಂಡು: ಕದ್ರಿ, ಕುದ್ರೋಳಿಯಲ್ಲೂ ದೇವರ ದರ್ಶನ ಭಾಗ್ಯ

05/07/2021, 14:55

ಮಂಗಳೂರು(reporterkarnataka news): 

ಸುಮಾರು ಎರಡು ತಿಂಗಳ ಲಾಕ್ ಡೌನ್ ಬಳಿಕ ಸೋಮವಾರ ಧಾರ್ಮಿಕ ಕೇಂದ್ರಗಳಾದ ದೇವಾಲಯ- ಮಂದಿರ, ಮಸೀದಿ ಮತ್ತು ಚರ್ಚ್ ತೆರೆದು ಪ್ರಾರ್ಥನೆಗೆ ಅವಕಾಶ ಮಾಡಿಕೊಲಾಯಿತು.

ನಗರದ ಕದ್ರಿ, ಮಂಗಳಾದೇವಿ, ಕುದ್ರೋಳಿ, ಶರವು ಸೇರಿದಂತೆ ಎಲ್ಲ ದೇಗುಲಗಳು ಸ್ಯಾನಿಟೈಸ್ ಮಾಡುವ ಮೂಲಕ ಭಕ್ತರ ಪಾಲಿಗೆ ತೆರೆದುಕೊಂಡವು. 

ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳಗಳಾದ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕೂಡ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾಧಾರಣ ಭಕ್ತಾದಿಗಳು ಆಗಮಿಸಿದ್ದರು.


ದೇವಸ್ಥಾನಗಳಲ್ಲಿ ಯಾವುದೇ ಸೇವೆ, ಅರ್ಚನೆ, ಪ್ರಸಾದಕ್ಕೆ ಅವಕಾಶ ಇರಲಿಲ್ಲ. ಭಕ್ತರು ಅತೀ ಶಿಸ್ತಿನಿಂದ ದೇಗುಲ ಪ್ರವೇಶಿಸಿ ದೇವರ ದರ್ಶನ ಪಡೆದು ಬಂದರು.

ಧರ್ಮಸ್ಥಳ, ಸುಬ್ರಹ್ಮಣ್ಯದ ಲಾಡ್ಜ್ ಗಳಲ್ಲಿ ಭಕ್ತಾಧಿಗಳು ಉಳಿದುಕೊಳ್ಳದಂತೆ ವಿನಂತಿಸಲಾಗಿದ್ದು, ದರ್ಶನ ಪಡೆದು ತೆರಳುವಂತೆ ಆಡಳಿತ ಮಂಡಳಿಗಳು ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು