ಇತ್ತೀಚಿನ ಸುದ್ದಿ
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: 2ನೇ ದೂರುದಾರನ ದೂರು ಕೂಡ ಎಸ್ಐಟಿಗೆ ಹಸ್ತಾಂತರ
05/08/2025, 19:47

ಬೆಳ್ತಂಗಡಿ(reporterkarnata.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣದ ಎರಡನೇ ದೂರುದಾರ ಜಯಂತ್ ಅವರು ನೀಡಿದ ದೂರನ್ನು ಎಸ್ಐಟಿಗೆ ಹಸ್ತಾಂತರಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ಪೊಲೀಸರು ಪ್ರಕರಣ ದಾಖಲಿಸದೆ ಬಾಲಕಿಯ ಮೃತದೇಹವೊಂದನ್ನು ಹೂತು ಹಾಕಿರುವುದಾಗಿ ಧರ್ಮಸ್ಥಳ ಠಾಣೆಗೆ ಎರಡನೇ ದೂರುದಾರರು ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದ ದೂರನ್ನು ಎಸ್ಐಟಿ ಗೆ ಹಸ್ತಾಂತರಿಸುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಆದೇಶ ನೀಡಿರುವುದರಿಂದ ಮುಂದಿನ ವಿಚಾರಣೆಗಾಗಿ ಎಸ್ಐಟಿ ತಂಡಕ್ಕೆ ಹಸ್ತಾಂತರಿಸಲಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಎಸ್ಐಟಿ ನಡೆಸಲಿದೆ ಎಂದು ದ.ಕ ಎಸ್ಪಿ ತಿಳಿಸಿದ್ದಾರೆ.