7:29 PM Monday4 - August 2025
ಬ್ರೇಕಿಂಗ್ ನ್ಯೂಸ್
ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:… ಸ್ಪಾಟ್ 1ರಲ್ಲಿ ದೊರೆತ ಡೆಬಿಟ್, ಪಾನ್ ಕಾರ್ಡ್ ವಾರಸುದಾರರು ಪತ್ತೆ; ಧರ್ಮಸ್ಥಳ ಪ್ರಕರಣಕ್ಕೂ… ಚುನಾವಣೆಯಲ್ಲಿ ಅಕ್ರಮಗಳನ್ನು ಪರಿಚಯಿಸಿದ್ದೇ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಬಂಗ್ಲಗುಡ್ಡೆಯಲ್ಲಿ ಉತ್ಖನನ! ಮಾನವ ಮೂಳೆಗಳು ಪತ್ತೆ?

04/08/2025, 19:23

ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ನಡೆಯುತ್ತಿದ್ದ 11ನೇ ಸ್ಪಾಟ್ ಅಗೆತವನ್ನು ನಿಲ್ಲಿಸಿದ ಎಸ್ಐಟಿ ತಂಡ ಬಂಗ್ಲಗುಡ್ಡದಲ್ಲಿ ಉತ್ಖನನ ಆರಂಭಿಸಿದ್ದು, ಅಲ್ಲಿ ಮಾನವ ಮೂಳೆಗಳು ಲಭ್ಯವಾಗಿದೆ ಎಂಬ ಮಾಹಿತಿ ಹರಿದಾಡಲಾರಂಭಿಸಿದೆ.
ಎಸ್ಐಟಿ ನಡೆಸಿದ ಉತ್ಖನನ ಕಾರ್ಯದಲ್ಲಿ ಸ್ಪಾಟ್ ನಂಬರ್ 6 ಹೊರತುಪಡಿಸಿ ಉಳಿದ ಕಡೆಗಳಲ್ಲಿ ಎಲ್ಲೂ ಮಾನವ ಅಸ್ತಿಪಂಜರದ ಕುರುಹು ಕಂಡು ಬಂದಿಲ್ಲ. ಇಂದು ಆರಂಭದಲ್ಲಿ ಸ್ಪಾಟ್ ನಂಬರ್ 11ರ ಅಗೆತಕ್ಕೆ ಸಿದ್ಧತೆ ನಡೆಸಲಾಗಿದ್ದು, ಆದರೆ ಇದ್ದಕ್ಕಿದ್ದ ಹಾಗೆ ಎಸ್ ಐಟಿ ತಂಡ ದಟ್ಟ ಕಾಡಿನ ಎತ್ತರದ ಪ್ರದೇಶಕ್ಕೆ(ಬಂಗ್ಲಗುಡ್ಡ) ತೆರಳಿ ಉತ್ಖನನ ಕಾರ್ಯ ಆರಂಭಿಸಿದರು. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಉಪಸ್ಥಿತರಿದ್ದರು. ಎಸ್ಐಟಿ ಟೀಮ್ ನಲ್ಲಿ ಒಂದು ರೀತಿ ಸಂಚಲನ ಮೂಡಿತ್ತು. ನಂತರ ಕಾಡಿನ ಆ ಎತ್ತರದ ಪ್ರದೇಶಕ್ಕೆ ಉಪ್ಪಿನ ಮೂಟೆಯನ್ನು ಒಯ್ಯಲಾಯಿತು. ಇಲ್ಲಿ ಮಾನವ ಅಸ್ತಿಪಂಜರದ ಅವಶೇಷಗಳು ದೊರೆತಿರುವುದು ಬಹುತೇಕ ಖಚಿತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು