8:49 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಬಂಗ್ಲಗುಡ್ಡೆಯಲ್ಲಿ ಉತ್ಖನನ! ಮಾನವ ಮೂಳೆಗಳು ಪತ್ತೆ?

04/08/2025, 19:23

ಧರ್ಮಸ್ಥಳ (reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತಂಡದಿಂದ ನಡೆಯುತ್ತಿದ್ದ 11ನೇ ಸ್ಪಾಟ್ ಅಗೆತವನ್ನು ನಿಲ್ಲಿಸಿದ ಎಸ್ಐಟಿ ತಂಡ ಬಂಗ್ಲಗುಡ್ಡದಲ್ಲಿ ಉತ್ಖನನ ಆರಂಭಿಸಿದ್ದು, ಅಲ್ಲಿ ಮಾನವ ಮೂಳೆಗಳು ಲಭ್ಯವಾಗಿದೆ ಎಂಬ ಮಾಹಿತಿ ಹರಿದಾಡಲಾರಂಭಿಸಿದೆ.
ಎಸ್ಐಟಿ ನಡೆಸಿದ ಉತ್ಖನನ ಕಾರ್ಯದಲ್ಲಿ ಸ್ಪಾಟ್ ನಂಬರ್ 6 ಹೊರತುಪಡಿಸಿ ಉಳಿದ ಕಡೆಗಳಲ್ಲಿ ಎಲ್ಲೂ ಮಾನವ ಅಸ್ತಿಪಂಜರದ ಕುರುಹು ಕಂಡು ಬಂದಿಲ್ಲ. ಇಂದು ಆರಂಭದಲ್ಲಿ ಸ್ಪಾಟ್ ನಂಬರ್ 11ರ ಅಗೆತಕ್ಕೆ ಸಿದ್ಧತೆ ನಡೆಸಲಾಗಿದ್ದು, ಆದರೆ ಇದ್ದಕ್ಕಿದ್ದ ಹಾಗೆ ಎಸ್ ಐಟಿ ತಂಡ ದಟ್ಟ ಕಾಡಿನ ಎತ್ತರದ ಪ್ರದೇಶಕ್ಕೆ(ಬಂಗ್ಲಗುಡ್ಡ) ತೆರಳಿ ಉತ್ಖನನ ಕಾರ್ಯ ಆರಂಭಿಸಿದರು. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಉಪಸ್ಥಿತರಿದ್ದರು. ಎಸ್ಐಟಿ ಟೀಮ್ ನಲ್ಲಿ ಒಂದು ರೀತಿ ಸಂಚಲನ ಮೂಡಿತ್ತು. ನಂತರ ಕಾಡಿನ ಆ ಎತ್ತರದ ಪ್ರದೇಶಕ್ಕೆ ಉಪ್ಪಿನ ಮೂಟೆಯನ್ನು ಒಯ್ಯಲಾಯಿತು. ಇಲ್ಲಿ ಮಾನವ ಅಸ್ತಿಪಂಜರದ ಅವಶೇಷಗಳು ದೊರೆತಿರುವುದು ಬಹುತೇಕ ಖಚಿತಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು