ಇತ್ತೀಚಿನ ಸುದ್ದಿ
ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಮುಂದುವರಿಯಲಿರುವ ಉತ್ಖನನ ಪ್ರಕ್ರಿಯೆ; ತಾತ್ಕಾಲಿಕ ಶೆಡ್ ನಿರ್ಮಾಣ
31/07/2025, 19:58

ಧರ್ಮಸ್ಥಳ(reporterkarnataka.com): ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ವಿಶೇಷ ತನಿಖಾ ತಂಡದಿಂದ ಹೂತಿಟ್ಟ ಶವಗಳ ಅವಶೇಷ ಮೇಲೆತ್ತುವ ಕಾರ್ಯ ಭರದಿಂದ ಸಾಗುತ್ತಿರುವ ಹಿನ್ನೆಲೆಯಲ್ಲಿ ಕಾಡಿನೊಳಗೆ ತಾತ್ಕಾಲಿಕ ಶೆಡ್ ನಿರ್ಮಾಣದ ಕಾರ್ಯ ಆರಂಭವಾಗಿದೆ.
ದೂರುದಾರ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಕೋರ್ಟ್ ಮುಂದೆ ಹೇಳಿರುವ ಕಾರಣ ಇದರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡವನ್ನು ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಅವರ ನೇತೃತ್ವದಲ್ಲಿ ರಚಿಸಿತ್ತು. ದೂರುದಾರ ಈಗಾಗಲೇ ಗುರುತಿಸಿರುವ 13 ಸ್ಪಾಟ್ ಗಳನ್ನು ಎಸ್ಐಟಿ ತಂಡ ಮಾರ್ಕ್ ಮಾಡಿದೆ. ಇವತ್ತು ಅನುಕ್ರಮವಾಗಿ 6ನೇ ಸ್ಪಾಟ್ ನ ಉತ್ಖನನ ನಡೆದಿದೆ. 6ನೇ ಸ್ಪಾಟ್ ನಲ್ಲಿ ಶವ ಹೂತಿಟ್ಟ ಬಗ್ಗೆ
ಮಹತ್ತರವಾದ ಪುರಾವೆಗಳು ಲಭಿಸಿವೆ. ಇದೀಗ ಸಮಾಧಿಗಳ ಉತ್ಖನನ ಕಾರ್ಯ ಮುಂದುವರಿಯಲಿರುವ ಹಿನ್ನೆಲೆಯಲ್ಲಿ ತಾತ್ಕಾಲಿಕ ಶೆಡನ್ನು ಕಾಡಿನೊಳಗೆ ನಿರ್ಮಿಸಲಾಗಿದೆ. ದೂರುದಾರ ಹೇಳುವ ಎಲ್ಲ ಸ್ಪಾಟ್ ಗಳಲ್ಲಿ ಅಗೆಯುವ ಅನಿವಾರ್ಯತೆ ಎಸ್ಐಟಿ ತಂಡಕ್ಕಿರುವ ಹಿನ್ನೆಲೆಯಲ್ಲಿ ಮಳೆ- ಬಿಸಿಲಿನಿಂದ ಕೊಂಚ ರಕ್ಷಣೆ ಪಡೆಯಲು ತಾತ್ಕಾಲಿಕ
ನಿರ್ಮಾಣದ ಕಾರ್ಯ ನಡೆದಿದೆ.