6:50 AM Tuesday1 - July 2025
ಬ್ರೇಕಿಂಗ್ ನ್ಯೂಸ್
ಕವಿಕಾದಲ್ಲಿ 14 ಕೋಟಿ ರೂ. ವೆಚ್ಚದಲ್ಲಿ ವಿದ್ಯುತ್ ಪರಿವರ್ತಕ ದುರಸ್ತಿ ಕೇಂದ್ರ: ಇಂಧನ… Kodagu Crime | ಸುಳ್ಳು ಕೊಲೆ ಕೇಸ್ ಮೂಲಕ ಅಮಾಯಕ ಜೈಲಿಗೆ: ಇನ್ಸ್​ಪೆಕ್ಟರ್,… ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕೊಂಡೇ ಅಧಿಕಾರಕ್ಕೆ ಬರಬೇಕು, ಸ್ವಂತ ಶಕ್ತಿಯಿಂದ… Karnataka CM | ಸರಕಾರ 5 ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ: ಮೈಸೂರಿನಲ್ಲಿ ಸಿಎಂ… ಮಾಂಸಕ್ಕಾಗಿ ಜಿಂಕೆ ಕೊಲ್ಲುತ್ತಿದ್ದ ಪಾಪಿಯ ಬಂಧನ: 10 ಜಿಂಕೆ,1 ಕಾಡು ಹಂದಿ ಮಾಂಸ,… Shivamogga | ಯುವತಿಗೆ ಲೈಂಗಿಕ ಕಿರುಕುಳ: ಮೆಗ್ಗಾನ್ ಆಸ್ಪತ್ರೆ ವೈದ್ಯ ಡಾ.ಅಶ್ವಿನ್ ಹೆಬ್ಬಾರ್… Chikkamagaluru | 3 ದಿನಗಳು ಕಳೆದರೂ ನಾಪತ್ತೆಯಾದ ಫಾರೆಸ್ಟ್ ಗಾರ್ಡ್ ಪತ್ತೆ ಇಲ್ಲ:… ಸಿದ್ದರಾಮಯ್ಯರಿಗೆ ಅಂಬೇಡ್ಕರ್ ಸಂವಿಧಾನ ಬೇಕಾ, ಇಂದಿರಾ ಗಾಂಧಿ ಸಂವಿಧಾನ ಬೇಕಾ: ಬಸವರಾಜ ಬೊಮ್ಮಾಯಿ… Mandya | ಕಾವೇರಿ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆ: ಹ ಕೆಆರ್ ಎಸ್… ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸೆ. 22ರಂದು ದಸರಾಕ್ಕೆ ಚಾಲನೆ:…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ

22/04/2021, 04:42

ಧರ್ಮಸ್ಥಳ(reporterkarnataka news):

ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ

ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧು-ವರರ ಮನೆಗೆ ಮುಟ್ಟಿಸಲಾಗುವುದು. ಏ.29 ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ತಮ್ಮ ಊರಿನ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಕೊಳ್ಳಬಹುದು.

ಈ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿದ್ದು, ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವಂತೆ ಸೂಚಿಸಲಾಗಿದೆ. ನಂತರ ಕಾನೂನಿನಂತೆ ತಾಲೂಕಿನ ಉಪ ನೋಂದಾವಣಾಧಿಕಾರಿಯವರಲ್ಲಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳಬಹುದು. ವಿವಾಹ ದಾಖಲಾತಿ ಮಾಹಿತಿಯನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು ಎಂದು ಶ್ರೀ ಕ್ಷೇತ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು