4:04 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ

22/04/2021, 04:42

ಧರ್ಮಸ್ಥಳ(reporterkarnataka news):

ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ

ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧು-ವರರ ಮನೆಗೆ ಮುಟ್ಟಿಸಲಾಗುವುದು. ಏ.29 ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ತಮ್ಮ ಊರಿನ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಕೊಳ್ಳಬಹುದು.

ಈ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿದ್ದು, ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವಂತೆ ಸೂಚಿಸಲಾಗಿದೆ. ನಂತರ ಕಾನೂನಿನಂತೆ ತಾಲೂಕಿನ ಉಪ ನೋಂದಾವಣಾಧಿಕಾರಿಯವರಲ್ಲಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳಬಹುದು. ವಿವಾಹ ದಾಖಲಾತಿ ಮಾಹಿತಿಯನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು ಎಂದು ಶ್ರೀ ಕ್ಷೇತ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು