6:56 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಧರ್ಮಸ್ಥಳ ಸಾಮೂಹಿಕ ವಿವಾಹ ರದ್ದು: ತಮ್ಮ ತಮ್ಮ ಊರಲ್ಲೇ ಸರಳ ಮದುವೆಗೆ ಅವಕಾಶ

22/04/2021, 04:42

ಧರ್ಮಸ್ಥಳ(reporterkarnataka news):

ಕೋವಿಡ್-19 ಕುರಿತು ಸರಕಾರ ಹೊರಡಿಸಿದ ಹೊಸ ಮಾರ್ಗಸೂಚಿಯ ಪ್ರಕಾರ

ಏ.29ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದ್ದು, ತಮ್ಮ ತಮ್ಮ ಊರಿನಲ್ಲೇ ಸರಳ ವಿವಾಹಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಸಾಮೂಹಿಕ ವಿವಾಹಕ್ಕೆ ನೋಂದಾಯಿಸಿಕೊಂಡಿರುವ ಎಲ್ಲ ಜೋಡಿಗಳಿಗೂ ಕ್ಷೇತ್ರದ ವತಿಯಿಂದ ಆಶೀರ್ವಾದಪೂರ್ವಕವಾಗಿ ನೀಡಲಾಗುವ ವಿವಾಹ ಸಂಬಂಧಿ ವಸ್ತುಗಳಾದ ಧೋತಿ, ಸೀರೆ, ರವಿಕೆ ಕಣ, ಮಂಗಳಸೂತ್ರ ಇತ್ಯಾದಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕರ್ತರ ಮುಖೇನ ವಧು-ವರರ ಮನೆಗೆ ಮುಟ್ಟಿಸಲಾಗುವುದು. ಏ.29 ರಂದು ನಿಗದಿತವಾಗಿರುವ ಗೋಧೋಳಿ ಲಗ್ನದಲ್ಲಿ ಅಥವಾ ತಮಗೆ ಅನುಕೂಲವಾದ ದಿನಾಂಕ ಮತ್ತು ಮುಹೂರ್ತದಲ್ಲಿ ನೋಂದಾಯಿಸಿಕೊಂಡಿರುವ ವಧು-ವರರು ತಮ್ಮ ತಮ್ಮ ಊರಿನ ಅಥವಾ ಕುಲದೇವರ ಸ್ಥಾನಗಳಲ್ಲಿ ಶಾಸ್ತ್ರೋಕ್ತವಾಗಿ ಮದುವೆ ಮಾಡಿಕೊಳ್ಳಬಹುದು.

ಈ ಸಂದರ್ಭ ಯೋಜನೆಯ ಕಾರ್ಯಕರ್ತರೋರ್ವರು ಹಾಜರಿದ್ದು, ಮದುವೆಯನ್ನು ಸರಳವಾಗಿಯೂ, ಸರಕಾರದ ಕೋವಿಡ್ ಶರತ್ತುಬದ್ಧ ನಿಯಮಾವಳಿಯಂತೆ ಆಚರಿಸಿಕೊಳ್ಳುವಂತೆ ಸೂಚಿಸಲಾಗಿದೆ. ನಂತರ ಕಾನೂನಿನಂತೆ ತಾಲೂಕಿನ ಉಪ ನೋಂದಾವಣಾಧಿಕಾರಿಯವರಲ್ಲಿ ವಿವಾಹ ನೋಂದಣಿಯನ್ನು ಮಾಡಿಕೊಳ್ಳಬಹುದು. ವಿವಾಹ ದಾಖಲಾತಿ ಮಾಹಿತಿಯನ್ನು ಕ್ಷೇತ್ರಕ್ಕೆ ಕಳುಹಿಸಿಕೊಡಬೇಕು ಎಂದು ಶ್ರೀ ಕ್ಷೇತ್ರದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು